ಹಾವೇರಿಯಲ್ಲಿ ಇಂದು ಸುರಿದ ಮಳೆ ಚಿಕ್ಕಮಗಳೂರುನಲ್ಲಿ ಎಂದಿನಂತೆ ಸುರಿಯುತ್ತಿದೆ; ಬೆಂಗಳೂರಲ್ಲಿ ಇವತ್ತು ಬೇಡ!

ಆದರೆ ಬೆಂಗಳೂರಿನ ಮಾತ್ರ ಅಲ್ಲ ಕನ್ನಡನಾಡಿನ ಅನೇಕ ಜನ ಇವತ್ತು ರಾಜ್ಯದ ರಾಜಧಾನಿಯಲ್ಲಿ ಮಳೆಯಾಗೋದು ಬೇಡ ಅಂತ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇನ್ನು ಸ್ವಲ್ಪ ಹೊತ್ತಿನಲ್ಲಿ ಅಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನೈ ಸೂಪರ್ ಕಿಂಗ್ಸ್ ನಡುವೆ ಮಾಡು ಇಲ್ಲವೇ ಮಡಿ ಪಂದ್ಯ ಶುರುವಾಗಲಿದೆ. ಪಂದ್ಯ ಗೆದ್ದರೆ ನಮ್ಮ ಬೆಂಗಳೂರು ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಆವಕಾಶವಿರುತ್ತದೆ.

ಹಾವೇರಿಯಲ್ಲಿ ಇಂದು ಸುರಿದ ಮಳೆ ಚಿಕ್ಕಮಗಳೂರುನಲ್ಲಿ ಎಂದಿನಂತೆ ಸುರಿಯುತ್ತಿದೆ; ಬೆಂಗಳೂರಲ್ಲಿ ಇವತ್ತು ಬೇಡ!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: May 18, 2024 | 7:41 PM

ಹಾವೇರಿ: ರಾಜ್ಯದ ನಾನಾಭಾಗಗಳಲ್ಲಿ ಮಳೆಯಾಗುತ್ತಿದ್ದರೂ ಹಾವೇರಿ ಜಿಲ್ಲೆಯಲ್ಲಿ (Haveri district) ಆಗುತ್ತಿಲ್ಲವಲ್ಲ ಅಂತ ಜನ ಮಾತಾಡಿಕೊಂಡಿದ್ದು ಉಂಟು ಮಾರಾಯ್ರೇ. ಇಗೋ ತಗೊಳ್ಳಿ, ಅಲ್ಲೂ ಇವತ್ತು ಮಳೆಯಾಗುತ್ತಿದೆ. ಟಿವಿ9 ಹಾವೇರಿ ನೀಡಿರುವ ಮಾಹಿತಿ ಪ್ರಕಾರ ಹಾವೇರಿ ನಗರ, ಬ್ಯಾಡಗಿ (Bydagi) ಮತ್ತು ಹಾನಗಲ್ (Hangal) ತಾಲ್ಲೂಕುಗಳಲ್ಲಿ ಶನಿವಾರ ಸಾಯಂಕಾಲ ಮಳೆಯಾಗಿದೆ. ಹಾವೇರಿ ಪಟ್ಟಣದಲ್ಲಿ ಶಾಲೆಗೆ ಹೋಗಿದ್ದ ಮಕ್ಕಳು ಕೊಡೆಗಳನ್ನು ಹಿಡಿದುಕೊಂಡು ಮನೆಗಳಿಗೆ ವಾಪಸ್ಸು ಹೋಗುತ್ತಿರುವುದನ್ನು ನೋಡಬಹುದು. ಆದರೆ ಅಥ್ಲೀಟ್ ಗಳಂತೆ ಕಾಣುತ್ತಿರುವ ಈ ಇಬ್ಬರು ಯುವತಿಯರಿಗೆ ಸುರಿಯುತ್ತಿರುವ ಮಳೆಯ ಪರಿವೆ ಇದ್ದಂತಿಲ್ಲ. ತಮ್ಮ ಪಾಡಿಗೆ ತಾವು ಓಡುತ್ತಿದ್ದಾರೆ! ಇವತ್ತ್ತು ಚಿಕ್ಕಮಗಳೂರಲ್ಲ್ಲೂ ಜೋರು ಮಳೆಯಾಗಿದೆ. ಒಂದು ವಾರದಿಂದ ಅಲ್ಲಿ ಸತತವಾಗಿ ಮಳೆಯಾಗುತ್ತಿದೆ. ಆದರೆ ಬೆಂಗಳೂರಿನ ಮಾತ್ರ ಅಲ್ಲ ಕನ್ನಡನಾಡಿನ ಅನೇಕ ಜನ ಇವತ್ತು ರಾಜ್ಯದ ರಾಜಧಾನಿಯಲ್ಲಿ ಮಳೆಯಾಗೋದು ಬೇಡ ಅಂತ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಇನ್ನು ಸ್ವಲ್ಪ ಹೊತ್ತಿನಲ್ಲಿ ಅಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನೈ ಸೂಪರ್ ಕಿಂಗ್ಸ್ ನಡುವೆ ಮಾಡು ಇಲ್ಲವೇ ಮಡಿ ಪಂದ್ಯ ಶುರುವಾಗಲಿದೆ. ಪಂದ್ಯ ಗೆದ್ದರೆ ನಮ್ಮ ಬೆಂಗಳೂರು ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಆವಕಾಶವಿರುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಅದರೆ ರೈತರಲ್ಲಿ ಸಂತಸ!

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ