ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್

Updated on: May 20, 2025 | 8:58 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅಷ್ಟಿಷ್ಟಲ್ಲ. ಒಂದು ಸಣ್ಣ ಮಳೆ ಬಂದರೂ ಸಾಕು ಸಾಲು ಸಾಲು ಅವಾಂತರಗಳೇ ಆಗುತ್ತವೆ. ಅದರಂತೆ ಭಾನುವಾರ ಸುರಿದ ಮಳೆಯಿಂದಾಗಿ ಬೆಂಗಳುರು ನಗರದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಶಿವಾನಂದ ಸರ್ಕಲ್‌ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್‌ (Chandru Bellulli Kabab Hotel) ಮಳೆ ನೀರಿನಿಂದ ಜಲಾವೃತವಾಗಿದೆ.

ಬೆಂಗಳೂರು, (ಮೇ 20): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅಷ್ಟಿಷ್ಟಲ್ಲ. ಒಂದು ಸಣ್ಣ ಮಳೆ ಬಂದರೂ ಸಾಕು ಸಾಲು ಸಾಲು ಅವಾಂತರಗಳೇ ಆಗುತ್ತವೆ. ಅದರಂತೆ ಭಾನುವಾರ ಸುರಿದ ಮಳೆಯಿಂದಾಗಿ ಬೆಂಗಳುರು ನಗರದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಶಿವಾನಂದ ಸರ್ಕಲ್‌ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್‌ (Chandru Bellulli Kabab Hotel) ಮಳೆ ನೀರಿನಿಂದ ಜಲಾವೃತವಾಗಿದೆ.

ಬೆಳ್ಳುಳ್ಳಿ ಕಬಾಬ್.. ಒನ್ ಮೋರ್ ಒನ್ ಮೋರ್ ಅಂತಿರಬೇಕು.. ಚಟಪಟ… ಚಟಪಟ.. ಅನ್ನೋ ಡೈಲಾಗ್ ಹೊಡೆದು ಸಿಕ್ಕಾಪಟ್ಟೆ ಫೇಮಸ್ ಆಗಿರುವ ಚಂದ್ರು ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಬೆಂಗಳೂರು ಕೆಫೆ ಕಟ್ಟದಲ್ಲಿರುವ ಚಂದ್ರು ಮಾಲೀಕತ್ವದ ಹೋಟೆಲ್ ಬೇಸ್ಮೆಂಟ್‌ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ಕಳೆದ 2 ದಿನಗಳಿಂದ ಹೋಟೆಲ್‌ ಬಂದ್‌ ಆಗಿದೆ. ಅಲ್ಲದೇ ಸುಮಾರು 15 ಲಕ್ಷ ರೂ. ವ್ಯಾಪಾರ ಲಾಸ್ ಆಗಿದೆ ಎಂದು ಚಂದ್ರು ಅವಲತ್ತುಕೊಂಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More