Kodagu News: ಕೊಡಗು ಜಿಲ್ಲೆಯಲ್ಲಿ ಮಳೆಯ ರುದ್ರನರ್ತನ, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
ಭಾಗಮಂಡಲ ಮತ್ತು ಜಿಲ್ಲಾ ಕೇಂದ್ರ ಮಡಿಕೇರಿ ನಡುವಿನ ರಸ್ತೆ ಸಹ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಮಡಿಕೇರಿ: ಬಿಟ್ಟೆನೆಂದರೂ ಬಿಡದೀ ಮಾಯೆ ಎಂಬಂತಿದೆ ಮಳೆಯ ಆರ್ಭಟ ಕೊಡಗು ಜಿಲ್ಲೆಯಲ್ಲಿ (Kodagu district). ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯತ್ತಿದೆ. ನಾಪೋಕ್ಲು (Napoklu)-ಚೆರಿಯ ಪರಂಬು ಪ್ರದೇಶಗಳು ಜಲಾವೃತಗೊಂಡಿವೆ. ಚೆರಿಯ ಪೆರಂಬು ಗ್ರಾಮಕ್ಕೆ ಪ್ರವಾಸ ಬಂದಿದ್ದ ಕೆಲವರು ಭಾರೀ ಮಳೆಯಂದಾಗಿ ಅಲ್ಲೇ ಸಿಲುಕುವಂತಾಗಿತ್ತು. ರಸ್ತೆಗಳಲೆಲ್ಲ ಜಲಾವೃತಗೊಂಡ (submerged) ಕಾರಣ ಅವರಿಗೆ ಸಾರಿಗೆ ಸಾಧನ ಇಲ್ಲವಾಗಿಬಿಟ್ಟಿತ್ತು. ಸ್ಥಳೀಯರು ತೆಪ್ಪಗಳ ಮೂಲಕ ಅವರನ್ನು ನಾಪೋಕ್ಲುಗೆ ತಂದು ಬಿಟ್ಟಿದ್ದಾರೆ. ಭಾಗಮಂಡಲ ಮತ್ತು ಜಿಲ್ಲಾ ಕೇಂದ್ರ ಮಡಿಕೇರಿ ನಡುವಿನ ರಸ್ತೆ ಸಹ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಮುಂಜಾಗ್ರತೆ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ.
ಮತ್ತಷ್ಟು ವಿಡಿಯೋಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

10 ಜನರ ಡೆತ್ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ

ಕಾರ್ತಿಕ್ ಮಹೇಶ್ಗೆ ನಾನು ಜೋಡಿ ಅಲ್ಲ: ಗಾಸಿಪ್ಗಳಿಗೆ ತೆರೆ ಎಳೆದ ನಮ್ರತಾ

ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
