Monsoon 2023: ಮಂಗಳವಾರವೂ ಬೆಂಗಳೂರಲ್ಲಿ ಮಳೆ, ಮಳೆಗಾಲ ದೂರವಿಲ್ಲ, ಹೊಸ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಯೋಚಿಸಿದೆಯೇ?

ಅರುಣ್​ ಕುಮಾರ್​ ಬೆಳ್ಳಿ Edited By:

Updated on: May 30, 2023 | 5:28 PM

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯೋನ್ಮುಖರಾಗುವಂತೆ ತಾಕೀತು ಮಾಡಿದ್ದಾರೆ.

ಬೆಂಗಳೂರು: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿದಿದೆ. ಅಕಾಲಿಕ ಮಳೆಗಳೇ ನಗರದಲ್ಲಿ ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿರುವುದರಿಂದ ಹೊಸ ಸರ್ಕಾರ ಕೂಡಲೇ ಮುನ್ನೆಚ್ಚರಿಕೆಯ ಕ್ರಮಗಳನ್ನು (precautionary measures) ಕೈಗೊಳ್ಳಬೇಕಿದೆ. ಯಾಕೆಂದರೆ, ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳು ಪುನರಾರಂಭವಾಗಲಿವೆ ಮತ್ತು ಮಾನ್ಸೂನ್ (Monsoon) ರಾಜ್ಯವನ್ನು ಪ್ರವೇಶಿಸಲು ಹೆಚ್ಚು ದಿನಗಳೇನೂ ಉಳಿದಿಲ್ಲ. ಒಂದು ಚಿಕ್ಕಮಳೆಗೆ ನಗರದ ರಸ್ತೆಗಳು ಜಲಾವೃತಗೊಳ್ಳುವುದನನ್ನು ನಾವು ನೋಡಿದ್ದೇವೆ. ಇನ್ನು ಜೋರು ಮಳೆ ಬಂದರೆ, ಶಾಲೆಗೆ ಹೋಗಿರುವ ಮಕ್ಕಳು ಮನೆಗೆ ವಾಪಸ್ಸಾಗುವವರೆಗೆ ಪೋಷಕರು ಜೀವ ಕೈಯಲ್ಲಿ ಹಿಡಿದುಕೊಂಡು ಕಾಯಬೇಕಾಗುತ್ತದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ನಿನ್ನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯೋನ್ಮುಖರಾಗುವಂತೆ ತಾಕೀತು ಮಾಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 30, 2023 04:52 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.