ಕಲಬುರಗಿ: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಒಂದೇ ಸಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ಜಿಲ್ಲೆ ಮಳಖೇಡ ಮೂಲಕ ಹರಿಯುವ ಕಾಗಿಣ ನದಿ ಉಕ್ಕಿರುವುದರಿಂದ ನದಿದಡದಲ್ಲಿರುವ ಉತ್ತಾರಾದಿಮಠ ಮತ್ತು ಮೂಲ ಬೃಂದಾವನ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಠದಲ್ಲಿ 7-8 ಜನ ಅರ್ಚಕರು ಸಿಲುಕಿರುವುದು ಗಾಬರಿ ಹುಟ್ಟಿಸುವ ಸಂಗತಿಯಾಗಿದ್ದು ಅವರನ್ನು ಹೊರತರಲು ಜಿಲ್ಲಾಡಳಿತ ಕೂಡಲೇ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ