ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ

ರಾಜ್ಯಾದಂತ ಮಳೆಯಾಗುತ್ತಿರುವುದು ನಿಜ ಅದರೆ ಬೆಂಗಳೂರು ನಗರ ಪ್ರದೇಶದಲ್ಲಿ ನಿರೀಕ್ಷೆಯ ಮಳೆಯಾಗುತ್ತಿಲ್ಲ. ಕಳೆದ ಶುಕ್ರವಾವ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದಲ್ಲೂ ಚೆನ್ನಾಗಿ ಮಳೆಯಾಗಲಿ ಅಂತ ಎಲ್ಲರೂ ಪ್ರಾರ್ಥಿಸಬೇಕಿದೆ ಅಂತ ಹೇಳಿದ್ದರು.

ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ
|

Updated on:Jul 15, 2024 | 10:32 AM

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಿಡಿಲಬ್ಬರದ ಮಳೆ ಮುಂದುವರಿದಿದೆ. ಕೆಲವೆಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ದೃಶ್ಯಗಳಲ್ಲಿ ಕಾಣುವ ಹಾಗೆ ಘಟ್ಟಗಳ ಪ್ರದೇಶ ಹಾಗೂ ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಧೋ ಅಂತ ಸುರಿಯಲಾರಂಭಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ ಎಂದು ವರದಿಗಾರ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ: ಕೆಆರ್​ಎಸ್, ಕಬಿನಿ ಡ್ಯಾಂಗಳಲ್ಲಿ ಹೆಚ್ಚುತ್ತಿದೆ ನೀರಿನ ಮಟ್ಟ

Published On - 10:29 am, Mon, 15 July 24

Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​