ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ

ಅರುಣ್​ ಕುಮಾರ್​ ಬೆಳ್ಳಿ

Updated on: Jul 15, 2024 | 10:32 AM

ರಾಜ್ಯಾದಂತ ಮಳೆಯಾಗುತ್ತಿರುವುದು ನಿಜ ಅದರೆ ಬೆಂಗಳೂರು ನಗರ ಪ್ರದೇಶದಲ್ಲಿ ನಿರೀಕ್ಷೆಯ ಮಳೆಯಾಗುತ್ತಿಲ್ಲ. ಕಳೆದ ಶುಕ್ರವಾವ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದಲ್ಲೂ ಚೆನ್ನಾಗಿ ಮಳೆಯಾಗಲಿ ಅಂತ ಎಲ್ಲರೂ ಪ್ರಾರ್ಥಿಸಬೇಕಿದೆ ಅಂತ ಹೇಳಿದ್ದರು.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಿಡಿಲಬ್ಬರದ ಮಳೆ ಮುಂದುವರಿದಿದೆ. ಕೆಲವೆಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ದೃಶ್ಯಗಳಲ್ಲಿ ಕಾಣುವ ಹಾಗೆ ಘಟ್ಟಗಳ ಪ್ರದೇಶ ಹಾಗೂ ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಧೋ ಅಂತ ಸುರಿಯಲಾರಂಭಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ ಎಂದು ವರದಿಗಾರ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ: ಕೆಆರ್​ಎಸ್, ಕಬಿನಿ ಡ್ಯಾಂಗಳಲ್ಲಿ ಹೆಚ್ಚುತ್ತಿದೆ ನೀರಿನ ಮಟ್ಟ

Published on: Jul 15, 2024 10:29 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.