ದಾವಣಗೆರೆ: ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಜನಜೀವನ ಅಸ್ತವ್ಯಸ್ತ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 11:11 AM

ರಾತ್ರಿ ಧೋ ಅಂತ ಸುರಿದ ಭಾರೀ ಮಳೆಯನ್ನು ಈಗಷ್ಟೇ ಕೊನೆಗೊಂಡಿರುವ ಮಳೆಗಾಲದಲ್ಲೂ ಕಾಣಲಿಲ್ಲ ಎಂದು ಸ್ಥಳೀಯರು ಹೇಳುತ್ತರುವರೆಂದರೆ ಮಳೆಯ ಪ್ರಮಾಣವನ್ನು ನೀವು ಅಂದಾಜಿಸಬಹುದು. ಪ್ರಾಯಶಃ ಸೋಮವಾರ ಬೆಂಗಳೂರು ನಗರದಲ್ಲಿ ಸುರಿದ ಮಳೆಯನ್ನು ನೆನಪಿಸುವಂತಿರಬೇಕು ದಾವಣಗೆರೆಯಲ್ಲಾದ ಮಳೆ!

ದಾವಣಗೆರೆ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಣ್ಣೆನಗರಿ ಎಂದು ಕರೆಸಿಕೊಳ್ಳುವ ದಾವಣೆಗೆರೆಯಲ್ಲಿ ಕಳೆದ ರಾತ್ರಿಯಿಂದ ಒಂದೇಸಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆಯೆಂದು ನಮ್ಮ ವರದಿಗಾರ ಹೇಳುತ್ತಾರೆ. ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಮನೆಯಲ್ಲಿ ಉಳಿದುಕೊಂಡಿರುವಂತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು ಮಳೆ ಅವಾಂತರ: ತುಂತುರು ಅಲ್ಲಿ ನೀರ ಹಾಡು, ಹಗಲಿನಲಿ, ಇರುಳಿನಲಿ, ಬಿಬಿಎಂಪಿ ಮಲಗಿರಲಿ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.