ಉಡುಪಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ

ಸ್ಥಳೀಯ ಮಹಿಳೆಯೊಬ್ಬರು ನಮ್ಮ ವರದಿಗಾನೊಂದಿಗೆ ಮಾತಾಡಿದ್ದು, ಪ್ರತಿ ಮಳೆಗಾಲದಲ್ಲಿ ಈ ಪ್ರದೇಶಗಳಲ್ಲಿ ಇಂಥ ಪರಿಸ್ಥಿತಿ ತಲೆದೋರುತ್ತಂತೆ. ಅದರೆ ಅಧಿಕಾರಿಗಳು ಕೂಡಲೇ ಜನರ ನೆರವಿಗೆ ಧಾವಿಸಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಅವರು ಹೇಳುತ್ತಾರೆ. ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣ ಸಹ ಪರಿಶೀಲನೆಗೆ ಬರುತ್ತಾರೆ ನೆರವು ಒದಗಿಸುತ್ತಾರೆ ಅಂತ ಮಹಿಳೆ ಹೇಳುತ್ತಾರೆ.

ಉಡುಪಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
|

Updated on: Jul 04, 2024 | 8:43 PM

ಉಡುಪಿ: ಬಿಟ್ಟೆನೆಂದರೂ ಬಿಡದೀ ಮಾಯೆ, ಉಡುಪಿ ಜಿಲ್ಲೆಯಲ್ಲಿ ಮಳೆಯ ಅವಾಂತರ ಈ ಮಾತನ್ನು ನೆನಪಿಸುತ್ತದೆ. ನಮ್ಮ ಉಡುಪಿ ವರದಿಗಾರ ಬ್ರಹ್ಮಾವರ ತಾಲ್ಲುಕಿನ ಅರೂರು ಮತ್ತು ಬೆಳ್ಳಾರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಮುಳುಗಿ ಹೋಗಿರುವ ಸ್ಥಳದಲ್ಲಿ ನಿಂತು ಅಲ್ಲಿ ಮಳೆಯಿಂದ ಆಗಿರುವ ಅವಾಂತರದ ಚಿತ್ರಣ ನೀಡುತ್ತಿದ್ದಾರೆ. ಇಲ್ಲಿರುವ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ಹರಿದು ಅವು ಜಲಾವೃತಗೊಂಡಿವೆ. ಬೈಂದೂರು ಮತ್ತು ಕುಂದಾಪುರ ತಾಲ್ಲೂಕುಗಳಲ್ಲಿ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸದ್ಯಕ್ಕೆ ಮಳೆ ಸುರಿಯುವುದು ನಿಂತಿದೆ ಆದರೆ ಇನ್ನೂ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಗ್ಗುಪ್ರದೇಶಗಳಲ್ಲಿರುವ ಜನರನ್ನು ಮುಂಜಾಗ್ರತೆಯ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸ ಶುರುವಾಗಿದೆ ಎಂದು ವರದಿಗಾರ ಹೇಳುತ್ತಾರೆ. ಈ ಪ್ರದೇಶಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿರೋದು ಸಮಾಧಾನಕರ ಸಂಗತಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಜ್ಯದಲ್ಲಿ ಮಳೆಯಿಂದಾಗಿ ಭಾರೀ ಅವಾಂತರ; ಮನೆ, ಠಾಣೆಗಳಿಗೆ ನುಗ್ಗಿದ ನೀರು, ಜಲ ಮೂಲಗಳಿಗೆ ಜೀವ ಕಳೆ

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್