AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಇವತ್ತು ಮತ್ತೇ ಜೋರು ಮಳೆ, ಜನ ಮತ್ತು ರೈತ ಸಮುದಾಯ ಖುಶ್!

ಧಾರವಾಡದಲ್ಲಿ ಇವತ್ತು ಮತ್ತೇ ಜೋರು ಮಳೆ, ಜನ ಮತ್ತು ರೈತ ಸಮುದಾಯ ಖುಶ್!

ಅರುಣ್​ ಕುಮಾರ್​ ಬೆಳ್ಳಿ
|

Updated on: May 23, 2024 | 7:36 PM

Share

ಇವತ್ತು ಬೆಂಗಳೂರಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸಿಂಗ್ ನಡೆಸಿದ ಬಳಿಕ ಮಾದ್ಯಮ ಗೋಷ್ಠಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ ತಿಂಗಳಲ್ಲಿ ಈ ಸಲ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ, ನಾನಾ ಭಾಗಗಳಲ್ಲಿ ರೈತರು ಬಿತ್ತನೆ ಕೆಲಸ ಆರಂಭಿಸಿದ್ದಾರೆ, ಬಿತ್ತನೆ ಬೀಜಗಳ ಬಗ್ಗೆ ರೈತರು ಆತಂಕಪಡಬೇಕಿಲ್ಲ, ಸಾಕಷ್ಟು ಪ್ರಮಾಣದಲ್ಲಿ ಅವು ಲಭ್ಯವಿವೆ ಎಂದರು.

ಧಾರವಾಡ: ಮೊನ್ನೆ ಅಂದರೆ ಕಳೆದ ವಾರ ಹುಬ್ಬಳ್ಳಿಯಲ್ಲಿ (Hubballi) ಜೋರು ಮಳೆಯಾದಾಗ ಧಾರವಾಡದಲ್ಲಿ (Dharwad) ಆಗಿರಲಿಲ್ಲ. ಆದರೆ ಕಳೆದ ಎರಡು ಮೂರು ದಿನಗಳಿಂದ ಧಾರವಾಡ ನಗರದಲ್ಲಿ ಜೋರು ಮಳೆಯಾಗುತ್ತಿದೆ. ಇವತ್ತು ಸಾಯಂಕಾಲ ನಗರದಾದ್ಯಂತ ಗುಡುಗು ಸಿಡಿಲು ಸಹಿತ ಭಾರೀ ಮಳೆ. ನಗರದ ರಸ್ತೆಗಳಲ್ಲಿ ಬುಳುಬುಳು ನೀರು ಹರಿದು ಹೋಗುತ್ತಿರುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು. ಮಳೆ ಸುರಿದ ರಭಸಕ್ಕೆ ಜನರು ಹೊರಗೆ ಬರುವ ಸಾಹಸ ಮಾಡಿಲ್ಲ. ಜನರ ಮಾತು ಹಾಗಿರಲಿ, ರಸ್ತೆಗಳ ಮೇಲೆ ವಾಹನ ಸಂಚಾರ ಸಹ ಕಾಣಲ್ಲ. ಈ ಭಾಗದ ರೈತರೆಲ್ಲ ಖುಷಿ ಪಡುತ್ತಿದ್ದಾರೆ. ಇವತ್ತು ಬೆಂಗಳೂರಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸಿಂಗ್ ನಡೆಸಿದ ಬಳಿಕ ಮಾದ್ಯಮ ಗೋಷ್ಠಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೇ ತಿಂಗಳಲ್ಲಿ ಈ ಸಲ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ, ನಾನಾ ಭಾಗಗಳಲ್ಲಿ ರೈತರು ಬಿತ್ತನೆ ಕೆಲಸ ಆರಂಭಿಸಿದ್ದಾರೆ, ಬಿತ್ತನೆ ಬೀಜಗಳ ಬಗ್ಗೆ ರೈತರು ಆತಂಕಪಡಬೇಕಿಲ್ಲ, ಸಾಕಷ್ಟು ಪ್ರಮಾಣದಲ್ಲಿ ಅವು ಲಭ್ಯವಿವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Bangalore Rains: ಮತ್ತೆ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಹಲವೆಡೆ ಟ್ರಾಫಿಕ್ ಜಾಮ್‌!