ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ: ಸಿದ್ದರಾಮಯ್ಯ, ಸಿಎಂ
ನಮಗೆ ಲಭ್ಯವಿರುವ ಮಾಹಿತಿ ಪ್ರಕಾರ ರವಿವಾರದಂದು ಮಂಗಳೂರಲ್ಲಿ ಒಂದಷ್ಟು ಜನರ ಗುಂಪೊಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಹತ್ಯೆ ಮಾಡಿದೆ. ಹತ್ಯೆಗೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಳು ಸಾಮಾಜಿಕ ಜಾಲತಾಣಗಳಲ್ಲಿ ಗೋಚರಿಸಿದ ಬಳಿಕ ಮಂಗಳೂರು ಪೊಲೀಸರು 15 ಜನರನ್ನು ಬಂಧಿಸಿದ್ದಾರೆ. ಹತ್ಯೆಯಾಗಿರುವ ವ್ಯಕ್ತಿ ಕೇರಳ ಮೂಲದ ದಿನಗೂಲಿ ನೌಕರನಾಗಿದ್ದ ಅನ್ನೋದು ಗೊತ್ತಾಗಿದೆ.
ಬೆಂಗಳೂರು, ಏಪ್ರಿಲ್ 30: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತಾಡಿದರು. ಪಾಕಿಸ್ತಾನ ಪರ ಘೋಷಣೆ (pro Pakistan slogan) ಕೂಗಿದ ವ್ಯಕ್ತಿಯೊಬ್ಬನನ್ನು ಮಂಗಳೂರಲ್ಲಿ ಹತ್ಯೆ ಮಾಡಲಾಗಿದೆ ಎಂದು ಪತ್ರಕರ್ತರೊಬ್ಬರು ಕೇಳಿದಾಗ, ಅವನು ಘೋಷಣೆ ಕೂಗಿದಾಗ ನೀನು ಅಲ್ಲಿದ್ಯಾ? ಎಂದು ಮರು ಪ್ರಶ್ನಿಸಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಅದು ತಪ್ಪು ಮತ್ತು ದೇಶದ್ರೋಹ, ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಎಂಬ ಆರೋಪದಲ್ಲಿ ಒಬ್ಬನನ್ನು ಕೊಲ್ಲಲಾಗಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ವರದಿ ಬಂದ ಬಳಿಕ ನಿಜಾಂಶ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಯಲ್ಲಿ 12 ಮಹಿಳೆಯರಿರುವುದನ್ನು ಕೇಳಿ ಸಂತೋಷಪಟ್ಟ ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಕೆಂಪೇಗೌಡ ಏರ್ಪೋರ್ಟಲ್ಲಿ ಭದ್ರತಾ ಲೋಪ: ರನ್ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್

