Dy CM DK Shivakumar: ತಾನೋದಿದ ಶಾಲೆಗೆ ಸೂಟುಧಾರಿಯಾಗಿ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 12:26 PM

ಶಾಲೆಯ ಆಡಳಿತ ಮಂಡಳಿ ಉಪ ಮುಖ್ಯಮಂತ್ರಿಗಳನ್ನು ಹೂಗುಚ್ಛ ನೀಡಿ ಬರಮಾಡಿಕೊಂಡಿತು.

ಬೆಂಗಳೂರು: ಜನರು ಸಾಧನೆ ಮಾಡಿದಾಗ ತಾವು ಓದಿದ ಶಾಲೆಗೆ ಭೇಟಿ ನೀಡಿ ವಿದ್ಯೆ-ಬುದ್ಧಿ ಹೇಳಿಕೊಟ್ಟ ಶಿಕ್ಷಕನ್ನು ಗೌರವಿಸುವುದು, ಅವರಿಂದ ಮತ್ತೊಮ್ಮೆ ಆಶೀರ್ವಾದ ಪಡೆಯೋದು ವಾಡಿಕೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇವತ್ತು ಅದನ್ನೇ ಮಾಡಿದರು. ಸಾಂಪ್ರದಾಯಿಕ ಉಡುಗೆಯಲ್ಲಿ (traditional attire) ಪ್ರಮಾಣ ವಚನ ಸ್ವೀಕರಿಸಿದ್ದ ಶಿವಕುಮಾರ್ ತಾವು ಓದಿದ ಬೆಂಗಳೂರು ರಾಜಾಜಿನಗರದ ನ್ಯಾಶನಲ್ ಪಬ್ಲಿಕ್ ಶಾಲೆಗೆ (National Public School) ಮಾತ್ರ ಸೂಟುಧಾರಿಯಾಗಿ ಹೋದರು. ಶಾಲೆಯ ಆಡಳಿತ ಮಂಡಳಿ ಉಪ ಮುಖ್ಯಮಂತ್ರಿಗಳನ್ನು ಹೂಗುಚ್ಛ ನೀಡಿ ಬರಮಾಡಿಕೊಂಡಿತು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.