AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಕಾಣಲು ಬಂದಾಗ ನಾಪತ್ತೆಯಾಗಿದ್ದ ರಾಜಣ್ಣನವರು ಜಾರಕಿಹೊಳಿ ಮನೆ ಸಭೆಯಲ್ಲಿ ಪ್ರತ್ಯಕ್ಷ!

ಶಿವಕುಮಾರ್ ಕಾಣಲು ಬಂದಾಗ ನಾಪತ್ತೆಯಾಗಿದ್ದ ರಾಜಣ್ಣನವರು ಜಾರಕಿಹೊಳಿ ಮನೆ ಸಭೆಯಲ್ಲಿ ಪ್ರತ್ಯಕ್ಷ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 05, 2025 | 12:45 PM

Share

ಶಿವಕುಮಾರ್ ತಮ್ಮ ಆಫೀಸಿಗೆ ಬಂದಾಗ ನಾಪತ್ತೆಯಾಗಿದ್ದ ರಾಜಣ್ಣ, ನಿನ್ನೆ ಸಾಯಂಕಾಲ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ವಾಲ್ಮೀಕಿ ಶಾಸಕರ ಸಭೆಯಲ್ಲಿ ಹಾಜರಿದ್ದರು. ಅದು ಹೇಗೆ ರಾಜಣ್ಣ ಸರ್? ಅಂತ ಕೇಳಿದರೆ, ಮುಖ ಸಿಂಡರಿಸಿಕೊಳ್ಳುವ ಸಚಿವ ಅಯ್ಯೋ ತಾನು ಅಲ್ಲಿಗೆ ಹೋಗಿದ್ದು ಸಾಯಂಕಾಲ 9 ಗಂಟೆಗೆ ಅನ್ನುತ್ತಾರೆ. ಸ್ವಾಮೀಜಿಯವರು ಸಭೆ ಕರೆದಿದ್ದು ಅಂತಲೂ ಸಚಿವ ಹೇಳುತ್ತಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಹಕಾರ ಸಚಿವ ಕೆಎನ್ ರಾಜಣ್ಣ ನಡುವೆ ಸಮರ ಜಾರಿಯಲ್ಲಿದೆ. ಅದು ಬಹಿರಂಗವಾಗಿ ನಡೆಯುತ್ತಿರುವುದರಿಂದ ಶೀತಲ ಸಮರ (cold war) ಅಂತ ಹೇಳಲಾಗದು. ನಿನ್ನೆ ಹಾಸನದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನ ಬದಲಾವಣೆ ಕುರಿತಂತೆ ಶಿವಕುಮಾರ್ ಅವರು ರಾಜಣ್ಣರನ್ನು ಭೇಟಿಯಾಗಲು ಅವರ ಆಫೀಸಿಗೆ ಹೋದಾಗ ರಾಜಣ್ಣ ಅಲ್ಲಿರಲಿಲ್ಲ. ಯಾಕೆ ಸರ್ ಅಂತ ಕೇಳಿದರೆ, ಆರೋಗ್ಯ ಸರಿಯಿರಲಿಲ್ಲ, ಹಾಗಾಗಿ ಮಗಳ ಮನೆ ಹತ್ತಿರವಿರುವ ವೈದ್ಯರನ್ನು ಕಾಣಲು ಹೋಗಿದ್ದೆ ಎನ್ನುತ್ತಾರೆ. ತಾವು ಭೇಟಿ ನೀಡುವ ಬಗ್ಗೆ ಶಿವಕುಮಾರ್ ಮುನ್ಸೂಚನೆ ನೀಡಿರಲಿಲ್ಲವೇ? ಅವರೇ ಹೇಳಬೇಕು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಎಐಸಿಸಿ ಹೆಸರು ದುರ್ಬಳಕೆ ಮಾಡುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್​ಗೆ ಸಚಿವ ಕೆಎನ್ ರಾಜಣ್ಣ ಖಡಕ್ ತಿರುಗೇಟು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.