ಕೆಎನ್ ರಾಜಣ್ಣ ಹೈಕಮಾಂಡ್ ಗೆ ಪತ್ರ ಬರೆಯಲಿರುವ ಬಗ್ಗೆ ಅವರನ್ನೇ ಇಲ್ಲ ಸಿದ್ದರಾಮಯ್ಯರನ್ನು ಕೇಳಬೇಕು: ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: Sep 18, 2023 | 2:02 PM

ರಾಜ್ಯಪಾಲರ ಅನುಮೋದನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನನ್ನು ಡಿಸಿಎಂ ಮಾಡಿದ್ದಾರೆ ಎದು ಹೇಳಿದ ಅವರು ರಾಜಣ್ಣ ಹೈಕಮಾಂಡ್ ಬಗೆ ಪತ್ರ ಬರೆಯುವ ಬಗ್ಗೆ ಗೊತ್ತಿಲ್ಲ, ಇಂಥ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರನ್ನೇ ಕೇಳಬೇಕು ಅಂತ ಶಿವಕುಮಾರ್ ಹೇಳಿದರು.

ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಮೂರು ಉಪ ಮುಖ್ಯಮಂತ್ರಿಗಳು ಬೇಕು ಅಂತ ಹೇಳಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah Government) ಇರುಸು ಮುರುಸು ಉಂಟು ಮಾಡಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ರಾಜಣ್ಣ ಹೇಳಿರುವುದನ್ನು ಜ್ಞಾಪಿಸಿದಾಗ, ಪ್ರಶ್ನೆಯನ್ನು ಅವರಿಗೆ ಕೇಳುವುದೇ ಒಳಿತು ಎಂದರು. ರಾಜ್ಯಪಾಲರ ಅನುಮೋದನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನನ್ನು ಡಿಸಿಎಂ ಮಾಡಿದ್ದಾರೆ ಎದು ಹೇಳಿದ ಅವರು ರಾಜಣ್ಣ ಹೈಕಮಾಂಡ್ ಬಗೆ ಪತ್ರ ಬರೆಯುವ ಬಗ್ಗೆ ಗೊತ್ತಿಲ್ಲ, ರವಿವಾರದಂದು ತೆಲಂಗಾಣ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯಯ್ಯ, ಹರಿಪ್ರಸಾದ್, ಸುರೇಶ್ ಮತ್ತು ಕೆಜೆ ಜಾರ್ಜ್ ಜೊತೆ ತಾನು ಹೈದರಾಬಾದ್ ಗೆ ಹೋಗಿದ್ದೆ, ಇಂದು ಬೆಳಗ್ಗೆ ವಾಪಸ್ಸು ಬಂದಾಗಲೇ ರಾಜಣ್ಣ ಪತ್ರ ಬರೆಯಲಿರುವ ಸಂಗತಿ ಗೊತ್ತಾಗಿದ್ದು ಎಂದರು. ತಾವೆಲ್ಲ ಮುಖ್ಯಮಂತ್ರಿಗಳ ಆಧೀನದಲ್ಲಿ ಕೆಲಸ ಮಾಡುವವರು, ಇಂಥ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರನ್ನೇ ಕೇಳಬೇಕು ಅಂತ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.