AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೀಕರಾಗಿರುವ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ

ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕ ನಂತರವೂ ಹೆಚ್ ಡಿ ಕುಮಾರಸ್ವಾಮಿ ಅತೃಪ್ತರೇ? ಪುನಃ ಕರ್ನಾಟಕದ ಮುಖ್ಯಮಂತ್ರಿಯಾಗೋದೇ ಅವರ ಗುರಿಯೇ? ಕೇವಲ 19 ಸ್ಥಾನ ಗೆದ್ದವರು ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆಯೇ? ನಿಖಿಲ್ ಕುಮಾರಸ್ವಾಮಿಯವರ ಮಾತುಗಳಿಂದ ಕನ್ನಡಿಗರಲ್ಲಿ ಇಂಥ ಪ್ರಶ್ನೆಗಳು ಹುಟ್ಟಿಕೊಂಡಿದ್ದರೆ ಆಶ್ಚರ್ಯವಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 28, 2024 | 2:17 PM

Share

ಮಂಡ್ಯ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಕೆಲವು ಸಂಗತಿಗಳನ್ನು ಒಗಟಿನ ರೂಪದಲ್ಲಿ ಮಾತಾಡಿದರು. ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾಂಗ್ರೆಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಅವರು ಕಾಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಭಗವಂತನಿಗೆ ಮಾತ್ರ ಗೊತ್ತಿರುವ ಸಂಗತಿಗಳನ್ನು ನನಗೆ ಕೇಳಿದರೆ ಹೇಗೆ? ಕೆಲವು ಸಂಗತಿಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡೋದು ಸೂಕ್ತವಲ್ಲ ಎನ್ನುತ್ತಾರೆ. ಚಂದ್ರಶೇಖರ್ ಶ್ರೀಗಳಿಗೆ ಸಚಿವ ಕೆಎನ್ ರಾಜಣ್ಣ ಅವರು ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿರುವುದಕ್ಕೆ ಉತ್ತರಿಸಿದ ನಿಖಿಲ್, ರಾಜಣ್ಣನವರು ವಯಸ್ಸಿನಲ್ಲಿ ಹಿರೀಕರು, ಅವರ ಬಗ್ಗೆ ಗೌರವವಿದೆ, ಅದರೆ ಸ್ವಾಮೀಜಿಗಳು ಸಮಾಜಮುಖಿ ಕೆಲಸ ಮಾಡುತ್ತಾರೆ, ಅವರ ಬಗ್ಗೆ ಲಘುವಾಗಿ ರಾಜಣ್ಣ ಮಾತಾಡೋದು ಸರಿಯಲ್ಲ, ಅವರು ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದಷ್ಟೇ ಹೇಳುತ್ತೇನೆ ಎಂದು ನಿಖಿಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ಬಗ್ಗೆ ನಿಖಿಲ್ ಕುಮಾರಸ್ವಾಮಿ ಶಾಕಿಂಗ್ ರಿಯಾಕ್ಷನ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ