ಆಘಾತಕ್ಕೊಳಗಾಗಿ ತೀವ್ರ ಬೇಸರದಲ್ಲಿ ಪ್ರತಿಕ್ರಿಯಿಸುತ್ತಿರುವ ರಾಜಣ್ಣ ಅಭಿಮಾನಿ ಮತ್ತು ಬೆಂಬಲಿಗರು

ಅರುಣ್​ ಕುಮಾರ್​ ಬೆಳ್ಳಿ

Updated on: Aug 12, 2025 | 10:39 AM

ರಾಜಣ್ಣನವರ ರಾಜೀನಾಮೆಯಿಂದ ತೀವ್ರವಾಗಿ ಬೇಸರಗೊಂಡಿರುವ ಮಹಿಳಾ ಅಭಿಮಾನಿಯೊಬ್ಬರು, ಅವರು ರಾಜೀನಾಮೆ ಸಲ್ಲಿಸಬಾರದಿತ್ತು, ಅವರ ರಾಜೀನಾಮೆಯಿಂದ ಬಹಳ ನೋವಾಗಿದೆ, ಅವರು ಪುನಃ ತಮ್ಮ ಪದವಿಯನ್ನು ಪಡೆದುಕೊಳ್ಳುವಂತಾಗಬೇಕು, ಮತ್ತು ಇದಕ್ಕೂ ಹೆಚ್ಚಿನ ಹುದ್ದೆಯ ಮೂಲಕ ವಾಪಸ್ಸಾಗಬೇಕು ಎಂದು ಹೇಳುತ್ತಾರೆ. ತಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ.

ತುಮಕೂರು, ಆಗಸ್ಟ್ 12: ಹಿರಿಯ ಕಾಂಗ್ರೆಸ್ ನಾಯಕ ಕೆಎನ್ ರಾಜಣ್ಣ (KN Rajanna) ಅವರನ್ನು ಸಂಪುಟದಿಂದ ವಜಾ ಮಾಡಿದ್ದು ರಾಜ್ಯದೆಲ್ಲೆಡೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ತುಮಕೂರುನಲ್ಲಿ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಈ ದಿಢೀರ್ ಬೆಳವಣಿಗೆಯಿಂದ ಆಘಾತಕ್ಕೊಳಗಾಗಿದ್ದಾರೆ ಮತ್ತು ನೊಂದಿದ್ದಾರೆ. ನಮ್ಮ ವರದಿಗಾರನೊಂದಿಗೆ ಮಾತಾಡಿರುವ ಅಭಿಮಾನಿಯೊಬ್ಬರು, ತಮ್ಮನ್ನು ವಜಾ ಮಾಡಿದ್ದರೂ ರಾಜಣ್ಣ ನೇರ ಮಾತುಗಾರಿಕೆ ಮತ್ತು ನಿಷ್ಠುರತೆಯಿಂದ ವಿಮುಖಲಾಗಲಾರರು, ತಳ ಸಮುದಾಯಗಳಿಗಾಗಿ ಅವರಷ್ಟು ಬೇರೆ ಯಾರೂ ದುಡಿದಿಲ್ಲ, ತಮ್ಮ ಮೇಲೆ ಅಪವಾದ ಬಂದರೆ ಸಹಿಸಿಕೊಳ್ಳದ ಜಾಯಮಾನ ಆವರದ್ದು, ಅವರ ವಿರುದ್ಧ ಪಕ್ಷದವರೇ ಮಾಡುತ್ತಿರುವ ಹುನ್ನಾರವನ್ನು ಹೈಕಮಾಂಡ್ ಮನಗಾಣಬೇಕು ಎಂದು ಹೇಳುತ್ತಾರೆ.

ಇದನ್ನೂ ಓದಿ:  ನನ್ನನ್ನು ವಜಾ ಮಾಡಿರುವುದರ ಹಿಂದೆ ಷಡ್ಯಂತ್ರ, ಪಿತೂರಿ ಇದೆ: ಕೆಎನ್​ ರಾಜಣ್ಣ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.