Video: ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ

Updated on: Sep 23, 2025 | 10:02 AM

ರಾಜಸ್ಥಾನದ ಬರಾನ್ ಜಿಲ್ಲೆಯ ಅಂಬಿಕಾ ಪೆಟ್ರೋಲ್ ಬಂಕ್​ನಲ್ಲಿ ದರೋಡೆಕೋರರು ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಲೂಟಿ ಮಾಡಿರುವ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಮುಸುಕುಧಾರಿಗಳ ಗುಂಪೊಂದು ದರೋಡೆ ನಡೆಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ದರೋಡೆಕೋರರು ಇಬ್ಬರು ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಚಾಕು ತೋರಿಸಿ ಬಾಯಿಗೆ ಟೇಪ್ ಬಿಗಿದು ಕಚೇರಿಯ ಕಪಾಟಿನ ಬೀಗ ಮುರಿದು ಸುಮಾರು 1.25 ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ. ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಬರಾನ್, ಸೆಪ್ಟೆಂಬರ್ 23: ರಾಜಸ್ಥಾನದ ಬರಾನ್ ಜಿಲ್ಲೆಯ ಅಂಬಿಕಾ ಪೆಟ್ರೋಲ್ ಬಂಕ್​ನಲ್ಲಿ ದರೋಡೆಕೋರರು ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಲೂಟಿ ಮಾಡಿರುವ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಮುಸುಕುಧಾರಿಗಳ ಗುಂಪೊಂದು ದರೋಡೆ ನಡೆಸಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ದರೋಡೆಕೋರರು ಇಬ್ಬರು ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಚಾಕು ತೋರಿಸಿ ಬಾಯಿಗೆ ಟೇಪ್ ಬಿಗಿದು ಕಚೇರಿಯ ಕಪಾಟಿನ ಬೀಗ ಮುರಿದು ಸುಮಾರು 1.25 ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ. ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಿಬ್ಬಂದಿ ತಮ್ಮನ್ನು ತಾವು ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾದರು ಮತ್ತು ಪೆಟ್ರೋಲ್ ಪಂಪ್ ಮಾಲೀಕರಿಗೆ ತಕ್ಷಣ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಪೊಲೀಸರು ಆಗಮಿಸಿ ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದರು. ಇಡೀ ಘಟನೆ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 23, 2025 10:00 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More