ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ

Updated on: Jul 21, 2026 | 6:09 PM

ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯ ನಡುವೆ ಎಂಎಲ್​ಸಿ ರಾಜೇಂದ್ರ ರಾಜಣ್ಣ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವಾರದಲ್ಲಿ ಸಂಪುಟ ವಿಸ್ತರಣೆ ಖಚಿತ ಎಂದಿರುವ ಅವರು, ತಮ್ಮ ತಂದೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅಥವಾ ತಮಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ಜು.21: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯು ಈ ವಾರದಲ್ಲಿ ನಡೆಯಲಿದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಂದ್ರ ರಾಜಣ್ಣ, “ಇವತ್ತು ಅಥವಾ ನಾಳೆ ಸಚಿವ ಸಂಪುಟ ವಿಸ್ತರಣೆಯಾಗುವ ಬಗ್ಗೆ ಮಾಹಿತಿ ಇದೆ. ಈ ವಾರದಲ್ಲಿ ಸಂಪುಟ ವಿಸ್ತರಣೆಯಾಗುವುದು ಖಚಿತ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ ರಾಜಣ್ಣ, ತಮ್ಮ ದೆಹಲಿ ಭೇಟಿಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. “ನನ್ನ ತಂದೆಯವರಿಗೆ ಮತ್ತೊಮ್ಮೆ ಅವಕಾಶ ನೀಡುವಂತೆ ನಾನು ಕೋರುತ್ತೇನೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ, ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀ ಪ್ರಸಾದ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಿ, ಈ ಸಂದರ್ಭದಲ್ಲಿ ತನ್ನ ಬೇಡಿಕೆಯನ್ನು ಅವರ ಮುಂದಿಡಲು ಯೋಜಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 21, 2026 06:08 PM
Follow Us