AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಗಂಗಾಧರ​ ಬ. ಸಾಬೋಜಿ
|

Updated on:May 29, 2026 | 8:37 PM

Share

ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ಜಾತಕದಲ್ಲಿರುವ ಬುಧಾದಿತ್ಯ ಯೋಗ ಮತ್ತು ಅವರ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ. 40 ವರ್ಷಗಳ ಹಿಂದೆಯೇ ಮುಖ್ಯಮಂತ್ರಿಯಾಗುವ ಭವಿಷ್ಯ ನುಡಿದಿದ್ದ ಗುರೂಜಿ, ಶಿವಕುಮಾರ್ ಅವರ ರಾಜಕೀಯ ಯಾನ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದ್ದಾರೆ. ಪ್ರಸ್ತುತ ಹಾದಿ ಸುಗಮವಾಗಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು ಗುರೂಜಿ ಹೇಳಿದ್ದಾರೆ. ಪಕ್ಷವನ್ನು ನಿರ್ವಹಿಸುವುದು, ಬೆಂಗಳೂರು ಸಮಸ್ಯೆಗಳನ್ನು ನಿಭಾಯಿಸುವುದು, ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು ಮತ್ತು ಮಹಿಳಾ ಮೀಸಲಾತಿ ಮಸೂದೆಯಂತಹ ವಿಷಯಗಳನ್ನು ಎದುರಿಸಬೇಕಾಗಿದೆ. ಡಿಕೆ ಶಿವಕುಮಾರ್ ಚಂಡಿಹೋಮ ಮಾಡಿದ ನಂತರ ಮಂತ್ರಿಯಾದ ಘಟನೆಯನ್ನೂ ನೆನಪಿಸಿಕೊಂಡಿದ್ದಾರೆ. ತಮ್ಮ ಆರಾಧ್ಯ ದೇವರುಗಳಾದ ಸುಬ್ರಹ್ಮಣ್ಯ, ದತ್ತಾತ್ರೇಯ ಮತ್ತು ಶೃಂಗೇರಿ ಜಗದ್ಗುರು ಭಾರತೀ ಮಹಾಸ್ವಾಮಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 29, 2026 08:35 PM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More