ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

Updated on: Aug 29, 2023 | 2:21 PM

ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಜನಿಕಾಂತ್​ಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಈ ಕಾರಣಕ್ಕೆ ಅವರು ಸಾಕಷ್ಟು ದೇವಾಲಯಗಳಿಗೆ ಈ ಮೊದಲು ಭೇಟಿ ನೀಡಿದ್ದಾರೆ. ಅದೇ ರೀತಿ ರಾಘವೇಂದ್ರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಜನಿಕಾಂತ್ (Rajinikanth) ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಮೊದಲು ಬೆಂಗಳೂರಿನ ಜಯನಗರ ಡಿಪೋಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಅವರು ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಜನಿಕಾಂತ್​ಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಈ ಕಾರಣಕ್ಕೆ ಅವರು ಸಾಕಷ್ಟು ದೇವಾಲಯಗಳಿಗೆ ಈ ಮೊದಲು ಭೇಟಿ ನೀಡಿದ್ದಾರೆ. ಅದೇ ರೀತಿ ರಾಘವೇಂದ್ರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More