ಪ್ರಾಯಶಃ ರಕ್ಷಣೆ ಕೇಳಲು ರಾಕೀ ರೈ ಡಿಸಿಎಂ ಶಿವಕುಮಾರ್​ರನ್ನು ಭೇಟಿಯಾಗಿರಬಹುದು: ರಿಕ್ಕಿ ರೈ ವಕೀಲ

ಅರುಣ್​ ಕುಮಾರ್​ ಬೆಳ್ಳಿ

Updated on: Apr 22, 2025 | 6:05 PM

ಇದುವರೆಗೆ ತಾವು ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ, ಕೆಲವರ ಮೇಲೆ ಸಂಶಯ ಇರೋದನ್ನು ಮಾತ್ರ ಪೊಲೀಸರಿಗೆ ಹೇಳಿದ್ದೇವೆ, ಅವರೆಲ್ಲ ಅರೋಪಿಗಳೇ ಹೊರತು ಅವರಿಂದಲೇ ಕೊಲೆ ನಡೆದಿದೆ ಅಂತ ಯಾವತ್ತೂ ಹೇಳಿಲ್ಲ ಎಂದು ವಕೀಲ ಹೇಳಿದರು. ಶುಕ್ರವಾರ ಮಧ್ಯರಾತ್ರಿಯ ನಂತರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು ಅವರು ಖಾಸಗಿ ಅಸ್ಪತ್ರೆಯೊಂದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮನಗರ, ಏಪ್ರಿಲ್ 22: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುತ್ತಪ್ಪ ರೈ ಮಗ ರಿಕ್ಕಿ ರೈ ಅವರ ವಕೀಲ ದಿವಂಗತ ಡಾನ್​ನ ಮತ್ತೊಬ್ಬ ಮಗ ರಾಕಿ ರೈ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರನ್ನು ಭೇಟಿ ಮಾಡಿರುವ ವಿಷಯ ತನಗೆ ಗೊತ್ತಿಲ್ಲ ಎಂದು ಹೇಳಿದರು. ಮೊದಲು ರಾಕಿ ರೈಯನ್ನು ರಿಕ್ಕಿ ರೈಗೆ ಕನ್ಪ್ಯೂಸ್ ಮಾಡಿಕೊಳ್ಳುವ ವಕೀಲ ನಂತರ ಗ್ರಹಿಕೆಯನ್ನು ಸರಿಮಾಡಿಕೊಂಡು, ಶಿವಕುಮಾರ್ ರಾಜ್ಯದ ಡಿಸಿಎಂ ಆಗಿದ್ದಾರೆ, ರಾಕಿ ರಕ್ಷಣೆ ಕೇಳಲು ಹೋಗಿರಬಹುದು ಎಂದು ಹೇಳಿದರು.

ಇದನ್ನೂ ಓದಿ:  ರಿಕ್ಕಿ ರೈ ಮೂಗಿಗೆ ಗುಂಡು ತಾಕಿದೆ, ಮಾತಾಡಿದರೆ ರಕ್ತ ಬರುತ್ತಿದೆ: ಜಗದೀಶ್, ಜಯ ಕರ್ನಾಟಕ ಸಂಘಟನೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.