AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮಕ್ಕಳ ಕೈಗೆ ಕಟ್ಟಿದ್ದ ರಾಖಿಗಳನ್ನು ತೆಗೆಸಿದ ಖಾಸಗಿ ಶಾಲೆ ಶಿಕ್ಷಕರು; ಪೋಷಕರ ಪ್ರತಿಭಟನೆ

ಮೈಸೂರು ಮಕ್ಕಳ ಕೈಗೆ ಕಟ್ಟಿದ್ದ ರಾಖಿಗಳನ್ನು ತೆಗೆಸಿದ ಖಾಸಗಿ ಶಾಲೆ ಶಿಕ್ಷಕರು; ಪೋಷಕರ ಪ್ರತಿಭಟನೆ

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Sep 01, 2023 | 3:31 PM

Share

ಮಕ್ಕಳ ಕೈಗೆ ಕಟ್ಟಿದ್ದ ರಾಖಿಗಳನ್ನು ಮೈಸೂರಿನ ಜಗನ್ಮೋಹನ ಅರಮನೆ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಶಿಕ್ಷಕರು ತೆಗೆಸಿರುವ ಆರೋಪ ಕೇಳಿಬಂದಿದ್ದು, ಶಾಲೆ ಮುಂದೆ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಪೋಷಕರ ಪ್ರತಿಭಟನೆಗೆ ಸ್ಥಳೀಯ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಸಾಥ್ ನೀಡಿದ್ದಾರೆ.

ಮೈಸೂರು: ರಾಜ್ಯಾದ್ಯಂತ ಗುರುವಾರ ರಕ್ಷಾಬಂಧನ (Raksha Bandhan) ಆಚರಿಸಲಾಯಿತು. ಮಕ್ಕಳ ಕೈಗೆ ಕಟ್ಟಿದ್ದ ರಾಖಿಗಳನ್ನು ಮೈಸೂರಿನ (Mysore) ಜಗನ್ಮೋಹನ ಅರಮನೆ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಶಿಕ್ಷಕರು (Teacher) ತೆಗೆಸಿರುವ ಆರೋಪ ಕೇಳಿಬಂದಿದ್ದು, ಶಾಲೆ ಮುಂದೆ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಪೋಷಕರ ಪ್ರತಿಭಟನೆಗೆ ಸ್ಥಳೀಯ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಮಾಜಿ ನಗರಪಾಲಿಕೆ ಸದಸ್ಯ ಪ್ರಶಾಂತ್ ಗೌಡ, ಹಿಂದೂ ಪರ ಸಂಘಟನೆ ಮುಖಂಡ ಲೋಹಿತ್ ಅರಸ್ ಸಾಥ್ ನೀಡಿದ್ದಾರೆ.

ಅಲ್ಲದೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾತೃತ್ವದ ಸಂಕೇತವಾಗಿ ಮಕ್ಕಳ ಕೈಗೆ ರಾಖಿ ಕಟ್ಟಲಾಗಿದೆ. ಇಂತಹ ರಾಖಿಗಳನ್ನು ಕತ್ತರಿಸಿ ಹಾಕಿರುವ ಶಾಲಾ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ ಕಡೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಇನ್ನು ಶಾಲಾ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಿಶೋರ್ ಕುಮಾರ್ ಎಂಬುವರು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More