ಕಾಂಪ್ರಮೈಸ್ ಮಾತೆ ಇಲ್ಲ, ಇನ್ನೇನಿದ್ದರೂ ಹೋರಾಟವೇ: ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದ ಮೇಲೆ ಎಂಆರ್ಟಿ ಆಡಿಯೋ ಸಂಸ್ಥೆ ಹಕ್ಕುಚ್ಯುತಿ ಉಲ್ಲಂಘನೆ ಪ್ರಕರಣ ದಾಖಲಿಸಿದೆ. ಇಂದು ವಿಚಾರಣೆಗೆ ಹಾಜರಾಗಿದ್ದ ರಕ್ಷಿತ್ ಶೆಟ್ಟಿ, ಪ್ರಕರಣ ಕುರಿತು ನ್ಯಾಯಾಲಯದಲ್ಲಿಯೇ ಹೋರಾಟ ಮಾಡುವುದಾಗಿ ಹೇಳಿದ್ದಾರೆ.
ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದ ಮೇಲೆ ಎಂಆರ್ಟಿ ಆಡಿಯೋ ಸಂಸ್ಥೆ ಹಕ್ಕುಚ್ಯುತಿ ಉಲ್ಲಂಘನೆ ಪ್ರಕರಣ ದಾಖಲಿಸಿದ್ದು, ನಟ ರಕ್ಷಿತ್ ಶೆಟ್ಟಿ ಇಂದು (ಆಗಸ್ಟ್ 02) ವಿಚಾರಣೆ ಹಾಜರಾಗಿದ್ದರು. ವಿಚಾರಣೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಕ್ಷಿತ್ ಶೆಟ್ಟಿ, ‘ಹಕ್ಕುಚ್ಯುತಿ ಪ್ರಕರಣದಲ್ಲಿ ನಮ್ಮ ತಪ್ಪಿಲ್ಲ, ಈ ಪ್ರಕರಣದಲ್ಲಿ ಕಾಂಪ್ರಮೈಸ್ ಆಗುವುದೇ ಇಲ್ಲ, ನ್ಯಾಯಾಲಯದ ಮೂಲಕ ಹೋರಾಟ ಮಾಡಿಯೇ ತೀರುತ್ತೇನೆ’ ಎಂದಿದ್ದಾರೆ. ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದಲ್ಲಿ ಬಳಸಲಾಗಿರುವ ಎರಡು ಹಳೆಯ ಹಾಡುಗಳ ಮೇಲೆ ಎಂಆರ್ಟಿ ಆಡಿಯೋ ಸಂಸ್ಥೆ ದೂರು ದಾಖಲಿಸಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us