ವಿಡಿಯೋ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ
Rakshit Shetty: ದೈವಭಕ್ತರಾದ ನಟ ರಕ್ಷಿತ್ ಶೆಟ್ಟಿ ಉಡುಪಿಯ ಕಾಪು ತಾಲ್ಲೂಕಿನ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದರು.
ನಟ ರಕ್ಷಿತ್ ಶೆಟ್ಟಿ (Rakshit Shetty) ದೇವರಲ್ಲಿ ನಂಬಿಕೆ, ಭಕ್ತಿಯುಳ್ಳವರು. ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗಷ್ಟೆ ದೈವ ಆರಾಧನೆ ಕಾರ್ಯಕ್ರಮವೊಂದಕ್ಕೆ ರಕ್ಷಿತ್ ಶೆಟ್ಟಿ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಇದೀಗ ನಟ ರಕ್ಷಿತ್ ಶೆಟ್ಟಿ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು (ಫೆಬ್ರವರಿ 23) ಕಾಪು ಮಾರಿಗುಡಿಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪಡೆದುಕೊಂಡರು. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಹೊಸ ಮಾರಿಗುಡಿ ದೇವಾಲಯ ನಿರ್ಮಾಣವಾಗುತ್ತಿದೆ. ಬಹು ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, ದೇವಾಲಯದಲ್ಲಿ ಬರದಿಂದ ಸಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ದರಕ್ಷಿತ್ ಶೆಟ್ಟಿ, ಇಳಕಲ್ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿ ಪಡೆದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ

