AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ: ಸುಂದರ ಮೂರ್ತಿ ಹೀಗಿದೆ ನೋಡಿ

ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮ ಲಲ್ಲಾನ ಪ್ರತಿಷ್ಠೆಯಾಗಿದೆ. ಗರ್ಭಗುಡಿಯಲ್ಲಿ ಬಾಲರಾಮ ವಿರಾಜಮಾನನಾಗಿ ಕುಳಿತುಕೊಂಡಿದ್ದಾರೆ. ರಾಮ ಲಲ್ಲಾ ಮೂರ್ತಿಯ ಬಗ್ಗೆ ಗೊಂದಲಗಳು ಸೃಷ್ಟಿಯಾಗಿತ್ತು. ಈ ಬಗ್ಗೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿತ್ತು. ಆದರೆ ಇದು ರಾಮನ ಮೂರ್ತಿ ಅಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದರು. ಇದೀಗ ರಾಮನ ಮೂರ್ತಿ ಅನಾವರಣ ಆಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Jan 22, 2024 | 1:05 PM

Share

ಅಯೋಧ್ಯೆ, ಜನವರಿ 22: ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮ ಲಲ್ಲಾನ ಪ್ರತಿಷ್ಠೆಯಾಗಿದೆ. ಗರ್ಭಗುಡಿಯಲ್ಲಿ ಬಾಲರಾಮ ವಿರಾಜಮಾನನಾಗಿ ಕುಳಿತುಕೊಂಡಿದ್ದಾರೆ. ರಾಮ ಲಲ್ಲಾ ಮೂರ್ತಿಯ ಬಗ್ಗೆ ಕೆಲವು ದಿನಗಳ ಹಿಂದೆ ಗೊಂದಲಗಳು ಸೃಷ್ಟಿಯಾಗಿತ್ತು. ಈ ಬಗ್ಗೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿತ್ತು. ಆದರೆ ಇದು ರಾಮನ ಮೂರ್ತಿ ಅಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದರು. ಇದೀಗ ರಾಮನ ಮೂರ್ತಿ ಅನಾವರಣ ಆಗಿದೆ. ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಬಾಲರಾಮನ ಮೂರ್ತಿಗೆ ಚಿನ್ನದ ತಿಲಕ, ಚಿನ್ನದ ಬಾಣ, ಬಿಲ್ಲು ಚಿನ್ನಾಭರಣ, ವಜ್ರ, ಹರಳುಗಳಿಂದ ತಯಾರಿಸಿದ ಕಿರೀಟ, ಚಿನ್ನ, ಹರಳುಗಳಿಂದ ತಯಾರಾಗಿರುವ ಬಾಲರಾಮನ ಕಿರೀಟವನ್ನು ಇಲ್ಲಿ ಕಾಣಬಹುದು. ರಾಮ ಲಲ್ಲಾ ಸುಂದರ ಮೂರ್ತಿಯ ಈ ವಿಡಿಯೋ ಇಲ್ಲಿದೆ. ಇನ್ನು ವೈರಲ್​​​ ಆಗಿರುವ ರಾಮ ಲಲ್ಲಾ ಮೂರ್ತಿಯ ಚಿತ್ರ ಬಗ್ಗೆ ತನಿಖೆ ನಡೆಸಬೇಕೆಂದು ಸತ್ಯೇಂದ್ರ ದಾಸ್ ಆಗ್ರಹಿಸಿದ್ದರು. ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳುವ ಮುನ್ನ ಮುಚ್ಚಿರುವ ಬಾಲ ರಾಮ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ. ಶ್ರೀರಾಮನ ಕಣ್ಣುಗಳು ಕಾಣುವ, ವೈರಲ್ ಆಗಿರುವ ವಿಗ್ರಹವು ನಿಜವಾದುಲ್ಲ. ಮೂರ್ತಿಯ ಕಣ್ಣುಗಳು ಕಾಣುವಂಥ ಫೋಟೊ ಬಹಿರಂಗವಾಗಿದ್ದೇ ಹೌದಾದರೆ ಯಾರಿಂದ ಆಯಿತು ಎಂಬುದರ ಕುರಿತು ತನಿಖೆಯಾಗಬೇಕು. ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆಗುತ್ತಿವೆ ಎಂಬುದನ್ನು ಪತ್ತೆಮಾಡಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದರು.

Published On - 12:59 pm, Mon, 22 January 24

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ