AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ: ಸುಂದರ ಮೂರ್ತಿ ಹೀಗಿದೆ ನೋಡಿ

ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮ ಲಲ್ಲಾನ ಪ್ರತಿಷ್ಠೆಯಾಗಿದೆ. ಗರ್ಭಗುಡಿಯಲ್ಲಿ ಬಾಲರಾಮ ವಿರಾಜಮಾನನಾಗಿ ಕುಳಿತುಕೊಂಡಿದ್ದಾರೆ. ರಾಮ ಲಲ್ಲಾ ಮೂರ್ತಿಯ ಬಗ್ಗೆ ಗೊಂದಲಗಳು ಸೃಷ್ಟಿಯಾಗಿತ್ತು. ಈ ಬಗ್ಗೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿತ್ತು. ಆದರೆ ಇದು ರಾಮನ ಮೂರ್ತಿ ಅಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದರು. ಇದೀಗ ರಾಮನ ಮೂರ್ತಿ ಅನಾವರಣ ಆಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Jan 22, 2024 | 1:05 PM

Share

ಅಯೋಧ್ಯೆ, ಜನವರಿ 22: ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮ ಲಲ್ಲಾನ ಪ್ರತಿಷ್ಠೆಯಾಗಿದೆ. ಗರ್ಭಗುಡಿಯಲ್ಲಿ ಬಾಲರಾಮ ವಿರಾಜಮಾನನಾಗಿ ಕುಳಿತುಕೊಂಡಿದ್ದಾರೆ. ರಾಮ ಲಲ್ಲಾ ಮೂರ್ತಿಯ ಬಗ್ಗೆ ಕೆಲವು ದಿನಗಳ ಹಿಂದೆ ಗೊಂದಲಗಳು ಸೃಷ್ಟಿಯಾಗಿತ್ತು. ಈ ಬಗ್ಗೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿತ್ತು. ಆದರೆ ಇದು ರಾಮನ ಮೂರ್ತಿ ಅಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದರು. ಇದೀಗ ರಾಮನ ಮೂರ್ತಿ ಅನಾವರಣ ಆಗಿದೆ. ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಬಾಲರಾಮನ ಮೂರ್ತಿಗೆ ಚಿನ್ನದ ತಿಲಕ, ಚಿನ್ನದ ಬಾಣ, ಬಿಲ್ಲು ಚಿನ್ನಾಭರಣ, ವಜ್ರ, ಹರಳುಗಳಿಂದ ತಯಾರಿಸಿದ ಕಿರೀಟ, ಚಿನ್ನ, ಹರಳುಗಳಿಂದ ತಯಾರಾಗಿರುವ ಬಾಲರಾಮನ ಕಿರೀಟವನ್ನು ಇಲ್ಲಿ ಕಾಣಬಹುದು. ರಾಮ ಲಲ್ಲಾ ಸುಂದರ ಮೂರ್ತಿಯ ಈ ವಿಡಿಯೋ ಇಲ್ಲಿದೆ. ಇನ್ನು ವೈರಲ್​​​ ಆಗಿರುವ ರಾಮ ಲಲ್ಲಾ ಮೂರ್ತಿಯ ಚಿತ್ರ ಬಗ್ಗೆ ತನಿಖೆ ನಡೆಸಬೇಕೆಂದು ಸತ್ಯೇಂದ್ರ ದಾಸ್ ಆಗ್ರಹಿಸಿದ್ದರು. ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳುವ ಮುನ್ನ ಮುಚ್ಚಿರುವ ಬಾಲ ರಾಮ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ. ಶ್ರೀರಾಮನ ಕಣ್ಣುಗಳು ಕಾಣುವ, ವೈರಲ್ ಆಗಿರುವ ವಿಗ್ರಹವು ನಿಜವಾದುಲ್ಲ. ಮೂರ್ತಿಯ ಕಣ್ಣುಗಳು ಕಾಣುವಂಥ ಫೋಟೊ ಬಹಿರಂಗವಾಗಿದ್ದೇ ಹೌದಾದರೆ ಯಾರಿಂದ ಆಯಿತು ಎಂಬುದರ ಕುರಿತು ತನಿಖೆಯಾಗಬೇಕು. ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆಗುತ್ತಿವೆ ಎಂಬುದನ್ನು ಪತ್ತೆಮಾಡಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದರು.

Published On - 12:59 pm, Mon, 22 January 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ