Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ

Updated on: Jun 05, 2026 | 9:20 AM

ರಾಮಲಿಂಗಾ ರೆಡ್ಡಿ ಪತ್ರಿಕಾಗೋಷ್ಠಿ ನೇರ ಪ್ರಸಾರ: ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಕೋರಮಂಗಲದ ನಿವಾಸದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಚಿವರ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಏತನ್ಮಧ್ಯೆ, ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆ ದಿನೇಶ್ ಗುಂಡೂರಾವ್, ಸಂತೋಷ್ ಲಾಡ್, ಹೆಚ್​.ಕೆ.ಪಾಟೀಲ್, ಜಮೀರ್ ಅಹ್ಮದ್, ಮಧು ಬಂಗಾರಪ್ಪ ಕೂಡ ತೀವ್ರ ಬೇಸರಗೊಂಡಿದ್ದಾರೆ. ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿದರೂ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಹೊಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us