AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್ ಹುಸೇನ್

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್ ಹುಸೇನ್

ಪ್ರಸನ್ನ ಗಾಂವ್ಕರ್​
| Edited By: |

Updated on: Jun 15, 2026 | 11:19 AM

Share

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್‌ಗೆ ಅವರು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ತೆರಳಿ ಇಕ್ಬಾಲ್ ಹುಸೇನ್ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಬೆಂಗಳೂರು, ಜೂನ್​​ 15: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಲ್ಲಯ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ಬ್ಲಾಕ್ ಹಿನ್ನೆಲೆ ಈ ಹಿಂದೆ ಶಾಸಕರಿಗೆ ಸ್ಟಂಟ್​ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಈ ನಡುವೆ ಆಗಾಗ ಬಿಪಿಯಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಸಿಎಂ ಡಿ.ಕೆ. ಶಿವಕುಮಾರ್​​ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us