Video: ಯುವಕನ ಸಮಯ ಪ್ರಜ್ಞೆ: ಅದೃಷ್ಟವಶಾತ್ ಅಪಾಯದಿಂದ ಪಾರಾದ 6 ತಿಂಗಳ ಮಗು

Edited By:

Updated on: Sep 27, 2023 | 8:14 PM

Ramanagara News: ಯುವಕನ ಸಮಯ ಪ್ರಜ್ಞೆಯಿಂದ 6 ತಿಂಗಳ ಮಗುವಿನ ಪ್ರಾಣ ಉಳಿದಿರುವಂತಹ ಘಟನೆ ರಾಮನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ತಂದೆಯಿಂದ ಮಿಸ್ ಆಗಿ ಮಗು ಕೆಳಗೆ ಬೀಳುತ್ತಿದ್ದು, ಮಕ್ಕದಲ್ಲೆ ತೆರಳಿತ್ತಿದ್ದ ಯುವಕನಿಂದ ಮಗುವಿನ ರಕ್ಷಣೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಮಗುವಿನ ರಕ್ಷಣೆ ದೃಶ್ಯ ಸೆರೆ ಆಗಿದೆ.

ರಾಮನಗರ, ಸೆಪ್ಟೆಂಬರ್​​ 27: ಯುವಕನ ಸಮಯ ಪ್ರಜ್ಞೆಯಿಂದ 6 ತಿಂಗಳ ಮಗುವಿನ (baby) ಪ್ರಾಣ ಉಳಿದಿರುವಂತಹ ಘಟನೆ ರಾಮನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಾರು ನಿಲ್ಲಿಸಿ  ದಂಪತಿ ಕೆಳಗೆ ಇಳಿಯುತ್ತಿದ್ದಾರೆ. ಮೊದಲು ಮಗು ಎತ್ತಿಕೊಂಡು ಪತಿ ಕಾರಿನಿಂದ ಇಳಿದಿದ್ದು, ಈ ವೇಳೆ ಪತ್ನಿ ಇಳಿಯುವಾಗ ಹ್ಯಾಂಡ್ ಬ್ರೇಕ್ ಮೇಲೆ ಕೈ ಇಟ್ಟಿದ್ದಾರೆ. ಇದರಿಂದ ಕಾರು ಮುಂದಕ್ಕೆ ಚಲಿಸಿದೆ. ಇದನ್ನು ಗಮನಿಸಿದ ಪತಿ ಮತ್ತೆ ಕಾರು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಪತಿಯಿಂದ ಮಿಸ್ ಆಗಿ ಮಗು ಕೆಳಗೆ ಬೀಳುತ್ತಿದ್ದು, ಮಕ್ಕದಲ್ಲೆ ತೆರಳಿತ್ತಿದ್ದ ಯುವಕನಿಂದ ಮಗುವಿನ ರಕ್ಷಣೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಮಗುವಿನ ರಕ್ಷಣೆ ದೃಶ್ಯ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 27, 2023 08:13 PM
Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More