ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್

Edited By:

Updated on: Jun 03, 2026 | 7:20 PM

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು.

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು. ‘ಅತ್ಯುನ್ನತವಾದ ಸ್ಥಾನದಲ್ಲಿ ಕುಳಿತರೆ ಅತ್ಯುನ್ನತವಾದ ಜವಾಬ್ದಾರಿ ಕೂಡ ಬರುತ್ತದೆ. ವೀಕೆಂಡ್ ವಿತ್ ರಮೇಶ್ ಶೋಗೆ ಡಿಕೆ ಶಿವಕುಮಾರ್ ಅವರು ಬಂದಾಗ ಒಂದು ಮಾತು ಹೇಳಿದ್ದರು. ರಾಜನಾದಮೇಲೆ ಸಮಸ್ಯೆಗಳಿಗೆ ಕೊನೆ ಇಲ್ಲ. ಒಂದಲ್ಲ ಒಂದು ಸಮಸ್ಯೆ ಬರುತ್ತದೆ. ಅದನ್ನು ಬಗೆಹರಿಸುತ್ತಲೇ ಇರಬೇಕು. ಇತಿಹಾಸ ಮೆಚ್ಚುವಂತಹ ಸರ್ಕಾರವನ್ನು ಅವರು ನಮಗೆ ನೀಡಲಿ. ಮುಂದಿನ ಪೀಳಿಗೆ ಕೂಡ ಡಿಕೆ ಶಿವಕುಮಾರ್ ಅವರ ಸಾಧನೆ ಬಗ್ಗೆ ಮಾತನಾಡಬೇಕು. ಅಂತಹ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕು. ಅವರಿಗೆ ಸಿಕ್ಕ ಕರ್ನಾಟಕಕ್ಕಿಂತ ಅವರು ಮುಂದೆ ಬಿಟ್ಟುಹೋಗುವ ಕರ್ನಾಟಕ ಹೆಚ್ಚು ಶ್ರೇಷ್ಠವಾಗಿರಲಿ’ ಎಂದು ರಮೇಶ್ ಅರವಿಂದ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Sunil MH