ಶಿಕಾರಿಪುರದಿಂದ ಒಬ್ಬಂಟಿಯಾಗಿ ಪ್ರವಾಸ ಶುರುಮಾಡುತ್ತೇನೆ ಎಂದು ವಿಜಯೇಂದ್ರಗೆ ಸವಾಲೆಸೆದ ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 18, 2025 | 4:35 PM

ರಮೇಶ್ ಜಾರಕಿಹೊಳಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಗ್ಗೆ ಬಹಳ ಗೌರವದಿಂದ ಮಾತಾಡಿದರು. ಅವರು ಪಕ್ಷದ ಹಿರಿಯರು ಮತ್ತು ಯಾವತ್ತಿಗೂ ತನ್ನ ನಾಯಕರೇ, ಅವರ ಮಾರ್ಗದರ್ಶನದ ಅವಶ್ಯಕತೆ ನಮಗಿದೆ, ಆದರೆ ಪಕ್ಷದ ಸಂಘಟನೆ ಮಾಡಿದಕ್ಕೆ ತಕ್ಕನಾಗಿ ಅವರು ಅಧಿಕಾರವನ್ನೂ ಅನುಭವಿಸಿದ್ದಾರೆ, ನಾಲ್ಕು ಬಾರಿ ರಾಜ್ಯದ ಸಿಎಂ ಆಗೋದು ಚಿಕ್ಕ ವಿಷಯವಲ್ಲ ಎಂದು ಅವರು ಹೇಳಿದರು.

ಬೆಳಗಾವಿ: ಜಿಲ್ಲೆಯ ಅಂಕಲಗಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಶಾಸಕ ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು. ಬಸನಗೌಡ ಪಾಟೀಲ್ ಮತ್ತು ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಬೆಂಕಿಯುಗುಳುತ್ತಿದ್ದಾರೆ. ಓಡಾಡುವುದು ಕಷ್ಟವಾಗುತ್ತೆ ಅಂತ ವಿಜಯೇಂದ್ರ ಜಾರಕಿಹೊಳಿಗೆ ಹೇಳಿದ್ದು ಇಬ್ಬರಿಗೂ ಸಹ್ಯವಾಗುತ್ತಿಲ್ಲ. ತಾನು ಶಿಕಾರಿಪುರಕ್ಕೆ ಹೋಗಿ ವಿಜಯೇಂದ್ರ ಮನೆ ಮುಂದಿನಿಂದಲೇ ರಾಜ್ಯ ಪ್ರವಾಸ ಶುರುಮಾಡುತ್ತೇನೆ, ತಾನೊಬ್ಬನೇ ಅಲ್ಲಿಗೆ ಹೋಗುತ್ತೇನೆ, ದಿನಾಂಕವನ್ನು ವಿಜಯೇಂದ್ರನೇ ನಿಗದಿ ಮಾಡಲಿ ಎಂದು ಜಾರಕಿಹೊಳಿ ಸವಾಲೆಸೆದರು. ಪಕ್ಷದ ಅಧ್ಯಕ್ಷ ಸ್ಥಾನದ ಬಗ್ಗೆ ತನಗೆ ಗೌವವಿದೆಯೇ ಹೊರತು ವಿಜಯೇಂದ್ರ ಬಗ್ಗೆ ಇಲ್ಲ ಎಂದು ಗೋಕಾಕ ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಯಡಿಯೂರಪ್ಪ ಬಗ್ಗೆ ಮಾತಾಡುವಾಗ ರಮೇಶ್ ಜಾರಕಿಹೊಳಿ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಲಿ: ವಿಜಯೇಂದ್ರ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.