ಡಿಕೆ ಶಿವಕುಮಾರ ವಿರುದ್ಧ ಮಾಡಿರುವ ಆರೋಪಗಳ ಸಿಡಿಗಳನ್ನು ಅಮಿತ್ ಶಾಗೆ ತಲುಪಿಸಿ ಸಿಬಿಐ ತನಿಖೆಗೆ ಮನವಿ ಮಾಡಿದ ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 03, 2023 | 1:33 PM

ಗೃಹ ಮಂತ್ರಿಗಳನ್ನು ಭೇಟಿಯಾಗಿ ಹೊರ ಬಂದ ಬಳಿಕ ರಮೇಶ್ ತಮ್ಮ ದುಂಬಾಲು ಬಿದ್ದಿದ್ದ ಮಾಧ್ಯಮದವರ ಜೊತೆ ಮಾತಾಡುವ ಗೋಜಿಗೆ ಹೋಗದೆ ಮೌನವಾಗಿ ನಡೆದುಹೋದರು.

ದೆಹಲಿ:  ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಶುಕ್ರವಾರ ನವದೆಹಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಅವರು ಮಾಡಿರುವ ಆರೋಪಗಳ ಸಿಡಿಗಳನ್ನು ನೀಡಿದರಲ್ಲದೆ ಸಿಬಿಐಗೆ ಪ್ರಕರಣವನ್ನು ವಹಿಸಬೇಕೆಂದು ಮನವಿ ಮಾಡಿದರು. ಗೃಹ ಮಂತ್ರಿಗಳನ್ನು ಭೇಟಿಯಾಗಿ ಹೊರ ಬಂದ ಬಳಿಕ ರಮೇಶ್ ತಮ್ಮ ದುಂಬಾಲು ಬಿದ್ದಿದ್ದ ಮಾಧ್ಯಮದವರ ಜೊತೆ ಮಾತಾಡುವ ಗೋಜಿಗೆ ಹೋಗದೆ ಮೌನವಾಗಿ ನಡೆದುಹೋದರು. ಕನ್ನಡದ ಕೆಲ ಪತ್ರಕರ್ತರು ಮಾತಾಡುವಂತೆ ಆಗ್ರಹಿಸಿದರೂ ಗೋಕಾಕ ಶಾಸಕ ತುಟಿ ಬಿಚ್ಚಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 03, 2023 01:32 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.