AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದಾರೆ, ಅವುಗಳನ್ನು ಬಗೆಹರಿಸುತ್ತೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಮೇಶ್ ಜಾರಕಿಹೊಳಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದಾರೆ, ಅವುಗಳನ್ನು ಬಗೆಹರಿಸುತ್ತೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 23, 2023 | 1:09 PM

Share

ರಾಜ್ಯ ಬಿಜೆಪಿಯ ಉದ್ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವುದಾಗಿದ್ದು ಆ ಕಾರ್ಯದಲ್ಲಿ ಕೈ ಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅತಿಹೆಚ್ಚು ಸ್ಥಾನಗಳನ್ನು ಗೆದ್ದಿಕೊಡುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ರಮೇಶ್ ಜಾರಕಿಹೊಳಿ ನೀಡಿರುವರೆಂದು ವಿಜಯೇಂದ್ರ ಹೇಳಿದರು.

ಬೆಂಗಳೂರು: ಅಸಮಾಧಾನಗೊಂಡಿರುವ ಬಿಜೆಪಿ ನಾಯಕರನ್ನು ಭೇಟಿಯಾಗಿ ಅವರಿಗಿರುವ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಶುರುಮಾಡಿದ್ದಾರೆ. ಗುರುವಾರ ಬೆಳಗ್ಗೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯನ್ನು (Ramesh Jarkiholi) ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯೇಂದ್ರ, ಅವರ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು ಮತ್ತು ಅವರು ಕೂಡ ಅಸಮಾಧಾನ ಪ್ರಕಟಿಸಿದ್ದರು. ಪಕ್ಷದ ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದು ತಮ್ಮ ಮೇಲಿರುವ ಜವಾಬ್ದಾರಿಯಾಗಿರುವುದರಿಂದ ಅವರ ಸಮಸ್ಯೆಗಳ ಬಗ್ಗೆ ಕೇಳಿದ್ದಾಗಿ ಹೇಳಿದರು. ಅವರು ತಮ್ಮ ನೋವು ಮತ್ತು ವಿಚಾರಗಳನ್ನು ಹೇಳಿಕೊಂಡಿದ್ದು ಅವುಗಳ ಕಡೆ ಗಮನ ನೀಡಲಾಗುವುದು ಎಂದ ಅವರು ರಾಜ್ಯ ಬಿಜೆಪಿಯ ಉದ್ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರ (PM Narendra Modi) ಕೈ ಬಲಪಡಿಸುವುದಾಗಿದ್ದು ಆ ಕಾರ್ಯದಲ್ಲಿ ಕೈ ಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅತಿಹೆಚ್ಚು ಸ್ಥಾನಗಳನ್ನು ಗೆದ್ದಿಕೊಡುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ನೀಡಿರುವರೆಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.