Karnataka Assembly Polls: ಅಥಣಿ ಬಿಜೆಪಿ ಸಮಾವೇಶದಲ್ಲಿ ಹೆಸರು ಉಲ್ಲೇಖಿಸದೆ ಲಕ್ಷ್ಮಣ ಸವದಿ ಮೇಲೆ ಟೀಕಾಪ್ರಹಾರ ನಡೆಸಿದ ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: May 06, 2023 | 4:48 PM

ಚುನಾವಣೆಯಲ್ಲಿ ಸೋತರೂ ಬಿಜೆಪಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಸಾರಿಗೆ ಖಾತೆಯನ್ನೂ ನೀಡಿತು. ಆದರೆ ಈ ಮನುಷ್ಯ ತನಗೆ ಅನ್ಯಾಯ ಅಂತ ಹೇಳಿ ಕಾಂಗ್ರೆಸ್ ಸೇರಿದ ಅಂತ ರಮೇಶ್ ಹೇಳಿದರು.

ಬೆಳಗಾವಿ: ಅಥಣಿ ಕ್ಷೇತ್ರದ ಫಲಿತಾಂಶ ಏನೇ ಅಗಲಿ, ಅದರ ನಂತರವೂ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಲಕ್ಷ್ಮಣ ಸವದಿ (Laxman Savadi) ನಡುವಿನ ವೈರತ್ವ ಕೊನೆಗೊಳ್ಳಲಾರದು. ಇವರಿಬ್ಬರು ಪರಸ್ಪರರನ್ನು ರಾಜಕೀಯವಾಗಿ ಮುಗಿಸಬೇಕೆನ್ನುವ ಪಣತೊಟ್ಟಂತಿದೆ. ಇಂದು ಅಥಣಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲೊ ಮಹೇಶ್ ಕುಮಟಳ್ಳಿ (Mahesh Kumtalli) ಪರ ಪ್ರಚಾರ ಮಾಡಿದ ರಮೇಶ್ ಜಾರಕಿಹೊಳಿ, ಸವದಿಯ ಹೆಸರು ಉಲ್ಲೇಖಿಸದೆ ಟೀಕಾಪ್ರಹಾರ ನಡೆಸಿದರು. ಚುನಾವಣೆಯಲ್ಲಿ ಸೋತರೂ ಬಿಜೆಪಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡಿ ಸಾರಿಗೆ ಖಾತೆಯನ್ನೂ ನೀಡಿತು. ಆದರೆ ಈ ಮನುಷ್ಯ ತನಗೆ ಅನ್ಯಾಯ ಅಂತ ಹೇಳಿ ಕಾಂಗ್ರೆಸ್ ಸೇರಿದ ಅಂತ ಹೇಳಿದ ರಮೇಶ್, ಅಸಲಿಗೆ ಅನ್ಯಾಯವಾಗಿದ್ದು ತನಗೆ, ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಗೆ ಎಂದರು. ಇಂಥ ವ್ಯಕ್ತಿಗೆ ಪಾಠ ಕಲಿಸುವ ಅವಕಾಶ ಜನರಿಗೆ ಸಿಕ್ಕಿದೆ, ಮಹೇಶ್ ಕುಮಟಳ್ಳಿಗೆ ವೋಟು ನೀಡಿ ಗೆಲ್ಲಿಸಬೇಕೆಂದು ಅವರು ಕೋರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.