ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮಂಡ್ಯದಲ್ಲಿ ಹೈ ಅಲರ್ಟ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 5:23 PM

ಬೆಂಗಳೂರಿನ ಕೆಫೆಯಲ್ಲಿ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮಾ.08) ಶಿವರಾತ್ರಿ ಹಬ್ಬವಾದ್ದರಿಂದ ಮಂಡ್ಯ(Mandya) ಜಿಲ್ಲೆಯ ಪ್ರಮುಖ ಶಿವನ ದೇಗುಲಗಳಲ್ಲಿ ಎರಡು ಪ್ರತ್ಯೇಕ ತಂಡಗಳಲ್ಲಿ ಬಾಂಬ್ ಪತ್ತೆ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇಗುಲಗಳಿಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮನದ ಹಿನ್ನೆಲೆಯಲ್ಲಿ ಭದ್ರತೆ ಮತ್ತು ತೀವ್ರ ನಿಗಾ ಇಡಲಾಗಿದೆ.

ಮಂಡ್ಯ, ಮಾ.08: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸರ ಹೈ ಅಲರ್ಟ್ ಆಗಿದ್ದಾರೆ. ಮಂಡ್ಯ(Mandya) ಜಿಲ್ಲೆಯ ಪ್ರಮುಖ ಶಿವನ ದೇಗುಲಗಳಲ್ಲಿ ಎರಡು ಪ್ರತ್ಯೇಕ ತಂಡಗಳಲ್ಲಿ ಬಾಂಬ್ ಪತ್ತೆ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇಗುಲಗಳಿಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮನದ ಹಿನ್ನೆಲೆಯಲ್ಲಿ ಭದ್ರತೆ ಮತ್ತು ತೀವ್ರ ನಿಗಾ ಇಡಲಾಗಿದೆ. ಮಂಡ್ಯದ ಅರಕೇಶ್ವರ, ಆದಿಚುಂಚನಗಿರಿ ಕಾಲಭೈರವೇಶ್ವರ, ಹನುಮಂತನಗರದ ಆತ್ಮಲಿಂಗೇಶ್ವರ, ಮದ್ದೂರಿನ ವೈದ್ಯನಾಥೇಶ್ವರ, ಮಳವಳ್ಳಿಯ ಮತ್ತಿತಾಳೇಶ್ವರ, ಮಂಡ್ಯ ಕೊಪ್ಪಲು ಕಾವೇರಿ ಬೋರೇದೇವರು, ಹೊಳಲು ತಾಂಡವೇಶ್ವರ, ಕೆರಗೋಡು ಪಂಚಲಿಂಗೇಶ್ವರ ದೇಗುಲಗಳಲ್ಲಿ ಬಾಂಬ್ ಪತ್ತೆ ದಳದಿಂದ ದೇವಸ್ಥಾನದ ಆವರಣ ಹಾಗೂ ದೇವಸ್ಥಾನದ ಒಳಗಡೆ ಪರಿಶೀಲನೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More