ಮಹಾ ಶಿವರಾತ್ರಿಯಂದೇ ಬಾಡೂಟ ಸವಿದ ಜನರು

Edited By:

Updated on: Feb 26, 2025 | 10:49 PM

ರಾಮನಗರ ಜಿಲ್ಲೆಯ ಮಂಗಾಡಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯಂದು ವಿಶೇಷ ಬಾಡೂಟದ ಆಚರಣೆ ನಡೆಯಿತು. ಚನ್ನಪ್ಪಸ್ವಾಮಿ ದೇವರಿಗೆ ನೈವೇದ್ಯವಾಗಿ ನೂರಾರು ಕೆಜಿ ಮಟನ್ ಮತ್ತು ಚಿಕನ್ ಬಳಸಿ ತಯಾರಿಸಿದ ಬಾಡೂಟವನ್ನು ಗ್ರಾಮಸ್ಥರು ಸವಿದಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿರುವ ವಿಶಿಷ್ಟ ಪದ್ಧತಿಯಾಗಿದೆ. ಅಕ್ಕಪಕ್ಕದ ಗ್ರಾಮಗಳ ಜನರು ಕೂಡ ಭರ್ಜರಿ ಊಟ ಸವಿದಿದ್ದಾರೆ.

ರಾಮನಗರ, ಫೆಬ್ರವರಿ 26: ದೇಶದೆಲ್ಲೆಡೆ ಇಂದು ಮಹಾ ಶಿವರಾತ್ರಿ (Maha Shivratri) ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ವೇಳೆ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಬಾಡೂಟ ಸವಿದಿದ್ದಾರೆ. ಗ್ರಾಮದ ಚನ್ನಪ್ಪಸ್ವಾಮಿ ದೇವರಿಗೆ ಗ್ರಾಮಸ್ಥರು ಬಾಡೂಟ ನೈವೇದ್ಯ ಇಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದ ಇದೇ ರೀತಿ ಶಿವರಾತ್ರಿ ಆಚರಣೆ ಮಾಡುತ್ತಿದ್ದಾರೆ. ಊಟಕ್ಕೆ ನೂರಾರು ಕೆಜಿ ಮಟನ್, ಚಿಕನ್ ಬಳಕೆ ಮಾಡಲಾಗಿದ್ದು, ಮಟನ್ ಸಾರು, ಬೋಟಿ ಗೊಜ್ಜು, ಚಿಕನ್ ಚಾಪ್ಸ್, ರಾಗಿ ಮುದ್ದೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 26, 2025 10:48 PM
Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More