ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ನಲ್ಲಿ ಹೋಗಲು ವಿಧಾನಸೌಧದಲ್ಲಿ ರ್ಯಾಂಪ್ ಅಳವಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿ ನೋವಿನ ಸಮಸ್ಯೆ ಇರುವುದರಿಂದ, ವಿಧಾನಸಭೆಗೆ ಅವರ ಸುಲಭ ಪ್ರವೇಶಕ್ಕಾಗಿ ವೀಲ್ಚೇರ್ ಬಳಕೆಗೆ ಅನುಕೂಲವಾಗುವಂತೆ ಹಲವು ಕಡೆ ರ್ಯಾಂಪ್ಗಳನ್ನು ಅಳವಡಿಸಲಾಗಿದೆ. ವಿಧಾನಸೌಧ ಲಾಂಜ್, ಆಡಳಿತ ಪಕ್ಷದ ಮೊಗಸಾಲೆ ಮತ್ತು ವಿಧಾನಸಭೆ ಪ್ರವೇಶ ದ್ವಾರದಲ್ಲಿ ರಾಂಪ್ಗಳನ್ನು ನಿರ್ಮಿಸಲಾಗಿದೆ. ರಾಜ್ಯಪಾಲರನ್ನು ಸ್ವಾಗತಿಸಲು ವಿಧಾನಸಭೆ ಪೂರ್ವ ಮೊಗಸಾಲೆಯಲ್ಲಿಯೂ ರಾಂಪ್ ಇದೆ.
ಬೆಂಗಳೂರು, ಫೆಬ್ರವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮಂಡಿ ನೋವಿನ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರವೇಶ ತನಕ ವ್ಹೀಲ್ ಚೇರ್ನಲ್ಲಿ ಹೋಗಲು ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ವ್ಹೀಲ್ ಚೇರ್ ಮೂಲಕ ಹೋಗಲು ವಿಧಾನಸೌಧ ಲಾಂಜ್, ವಿಧಾನಸಭೆ ಆಡಳಿತ ಪಕ್ಷದ ಮೊಗಸಾಲೆ ಮತ್ತು ವಿಧಾನಸಭೆ ಪ್ರವೇಶ ದ್ವಾರದ ಮೂರು ಕಡೆ ಱಂಪ್ ಹಾಕಲಾಗಿದೆ. ಇನ್ನು, ರಾಜ್ಯಪಾಲರ ಸ್ವಾಗತಿಸಲು ವಿಧಾನಸಭೆ ಪೂರ್ವ ಮೊಗಸಾಲೆ ಮೂಲಕ ಪ್ರವೇಶಿಸಲು ರ್ಯಾಂಪ್ ಅಳವಡಿಸಲಾಗಿದೆ.