Karnataka Assembly Polls: ಪ್ರಜಾಪ್ರಭುತ್ವದ ಉತ್ಸವದಲ್ಲಿ ಶಾಂತಿಯುತವಾಗಿ ಪಾಲ್ಗೊಂಡು ಸಫಲಗೊಳಿಸಿದ ಎಲ್ಲ ಕನ್ನಡಿಗರಿಗೆ ಕೃತಜ್ಞತೆ ಸಲ್ಲಿಸಿದ ಸುರ್ಜೆವಾಲಾ

Updated on: May 12, 2023 | 3:54 PM

ಅಸಲಿಗೆ ಈ ಚುನಾವಣೆಯಲ್ಲಿ ಗೆದ್ದವರು ಆರೂವರೆ ಕನ್ನಡಿಗರು ಎಂದು ಸುರ್ಜೆವಾಲಾ ಹೇಳಿದರು.

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಬಗ್ಗೆ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅತೀವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಪ್ರಜಾಪ್ರಭುತ್ವದ ಉತ್ಸವದಲ್ಲಿ (Festival of Democracy) ಶಾಂತಿಯುತವಾಗಿ ಪಾಲ್ಗೊಂಡ 6.5 ಕೋಟಿ ಕನ್ನಡಗರಿಗೆ ಧನ್ಯವಾದ ಅರ್ಪಿಸಿದರು. ಕರ್ನಾಟಕದ ಮತದಾರರು ಕಾಂಗ್ರೆಸ್ ಪಕ್ಷದೆಡೆ ವಿಶ್ವಾಸವನ್ನು ಪ್ರದರ್ಶಸಿದ್ದಾರೆ ಮತ್ತು ಪಕ್ಷ ಭರವಸೆ ನೀಡಿರುವ 5 ಭರವಸೆಗಳ ಬಗ್ಗೆ ಮೆಚ್ಚುಗೆ ಸೂಸಿದ್ದಾರೆ ಎಂದ ಅವರು ಹೇಳಿದರು. ಅಸಲಿಗೆ ಈ ಚುನಾವಣೆಯಲ್ಲಿ ಗೆದ್ದವರು ಆರೂವರೆ ಕನ್ನಡಿಗರ ಎಂದ ಸುರ್ಜೆವಾಲಾ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಸಂಗತಿಗಳನ್ನು ಕವರ್ ಮಾಡಿದ ಮಾಧ್ಯಮದವರಿಗೂ ಕೃತಜ್ಞತೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More