ಈ ಸಿನಿಮಾ ಒಪ್ಪಿಕೊಳ್ಳೋಕೆ ಭಯವಾಯ್ತು; ‘ಅಜ್ಞಾತವಾಸಿ’ ಬಗ್ಗೆ ರಂಗಾಯಣ ರಘು ನೇರಮಾತು
ನಟ ರಂಗಾಯಣ ರಘು ಅವರು ‘ಅಜ್ಞಾತವಾಸಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಏಪ್ರಿಲ್ 11ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಕುರಿತು ‘ಟಿವಿ9’ ನಡೆಸಿದ ವಿಶೇಷ ಸಂದರ್ಶನದಲ್ಲಿ ರಂಗಾಯಣ ರಘು ಅವರು ವಿವರವಾಗಿ ಮಾತನಾಡಿದ್ದಾರೆ.
ಟ್ರೇಲರ್ ನೋಡಿದ ಎಲ್ಲರಿಗೂ ‘ಅಜ್ಞಾತವಾಸಿ’ ಸಿನಿಮಾ (Agnyathavasi) ಮೇಲೆ ನಿರೀಕ್ಷೆ ಮೂಡಿತು. ಈ ಚಿತ್ರದಲ್ಲಿ ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸಿದ್ದು ಮೂಲಿಮನಿ, ಪಾವನಾ ಗೌಡ, ಶರತ್ ಲೋಹಿತಾಶ್ವ ಮುಂತಾದವರು ಸಹ ಪಾತ್ರವರ್ಗದಲ್ಲಿ ಇದ್ದಾರೆ. ಜನಾರ್ಧನ್ ಚಿಕ್ಕಣ್ಣ ನಿರ್ದೇಶನ ಮಾಡಿರುವ ‘ಅಜ್ಞಾತವಾಸಿ’ ಸಿನಿಮಾಗೆ ಹೇಮಂತ್ ಎಂ. ರಾವ್ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಬಗ್ಗೆ ರಂಗಾಯಣ ರಘು (Rangayana Raghu) ಅವರಿಗೆ ವಿಶೇಷ ಹೆಮ್ಮೆ ಇದೆ. ‘ಈ ಚಿತ್ರದಲ್ಲಿ ಎಲ್ಲ ಪಾತ್ರಗಳು ಚೆನ್ನಾಗಿವೆ. ಕಥೆ ಕೇಳಿದಾಗ ಈ ಸಿನಿಮಾ ಒಪ್ಪಿಕೊಳ್ಳೋಕೆ ಭಯ ಆಯಿತು’ ಎಂದು ಹೇಳಿರುವ ಅವರು, ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಆಪರೇಷನ್ ಸಿಂಧೂರ್, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ

ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್

‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?

ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್ರ ಮಾವ ಹೇಳಿದ್ದೇನು?
