ತಿಂಗಳಿಗೆ 4-5 ಸಲ ದುಬೈಗೆ ಹೋಗುತ್ತಿದ್ದ ರನ್ಯಾ ಇದಕ್ಕೆ ಮೊದಲು ಕಳುವಿನಿಂದ ತಂದ ಚಿನ್ನ ಎಲ್ಲಿಗೆ ಹೋಯಿತು? ಸುನೀಲ ಕುಮಾರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2025 | 6:30 PM

ಕೇಂದ್ರದ ಏಜೆನ್ಸಿಗಳ ದೆಸೆಯಿಂದಾಗೇ ಪ್ರಕರಣ ಬೆಳಕಿಗೆ ಬಂದಿದೆ, ಅವು ತಮ್ಮ ಕೆಲಸ ಮಾಡುತ್ತಿವೆ, ಅದರೆ ಸರ್ಕಾರದ ನಿರ್ಲಿಪ್ತ ಧೋರಣೆ ಅರ್ಥವಾಗುತ್ತಿಲ್ಲ, ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಗೃಹ ಸಚಿವ ನಂಗೊತ್ತಿಲ್ಲ ಅನ್ನುತ್ತಾರೆ, ರನ್ಯಾ ರಾವ್ ಏರ್ಪೋರ್ಟ್​ನಲ್ಲಿ ಅರೆಸ್ಟ್ ಆದ ಕೂಡಲೇ ಯಾರಿಗೋ ಫೋನ್ ಮಾಡಿದರಂತೆ, ಅವರು ಯಾರಿಗೆ ಫೋನ್ ಮಾಡಿದ್ದು, ಯಾಕೆ ಮಾಡಿದ್ದು ಅಂತ ಗೊತ್ತಾಗಬೇಕು ಎಂದು ಸುನೀಲ ಕುಮಾರ ಹೇಳಿದರು.

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ (Ranya Rao gold smuggling case) ಸಂಬಂಧಿಸಿದಂತೆ ರಾಜ್ಯದ ಸಚಿವರು ಅದರಲ್ಲಿ ಭಾಗಿಯಾಗಿರುವ ಬಗ್ಗೆ ದಿನದಿನಕ್ಕೆ ಅನುಮಾನಗಳು ದಟ್ಟವಾಗುತ್ತಿವೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನೀಲ ಕುಮಾರ ಹೇಳಿದರು. ರನ್ಯಾ ತಿಂಗಳಿಗೆ 4-5 ಬಾರಿ ದುಬೈಗೆ ಹೋಗಿ ಬರುತ್ತಿದ್ದರಂತೆ, ಅಂದರೆ ಹಿಂದೆಲ್ಲ ಅವರು ಕಳ್ಳ ಸಾಗಾಣಿಕೆ ಮಾಡಿಕೊಂಡು ದೇಶಕ್ಕೆ ತೆಗೆದುಕೊಂಡು ಬಂದ ಚಿನ್ನ ಎಲ್ಲಿಗೆ ಹೋಯಿತು? ಅದು ಚಾಮರಾಜಪೇಟೆಗೆ ಹೋಯ್ತಾ ಅಥವಾ ಸದಾಶಿವನಗರಕ್ಕೆ ಹೋಯಿತಾ ಅನ್ನೋದು ಗೊತ್ತಾಗಬೇಕಿದೆ ಎಂದು ಸುನೀಲ ಕುಮಾರ ಹೇಳಿದರು. ಆಕೆಗೆ ಸರ್ಕಾರದಿಂದ ಯಾಕೆ ಪ್ರೋಟೋಕಾಲ್ ಸಿಗುತಿತ್ತು ಅನ್ನೋದು ಸಹ ಬೆಳಕಿಗೆ ಬರಬೇಕಿದೆ ಎಂದು ಶಾಸಕ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ಗೋಲ್ಡ್ ಸ್ಮಗ್ಲಿಂಗ್ ಹಿಂದಿರೋ ಸಚಿವರು ಯಾರು? ಸದನದಲ್ಲೂ ಸದ್ದು ಮಾಡಿದ ರನ್ಯಾ ರಾವ್ ಕೇಸ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.