ಜೋಕರ್ ಅನ್ನೋ ಪದ ನನಗಿಂತ ಜಾಸ್ತಿ ಕುಮಾರಸ್ವಾಮಿಗೆ ಸೂಟ್ ಆಗುತ್ತದೆ: ಚಲುವರಾಯಸ್ವಾಮಿ, ಸಚಿವ

Updated on: Apr 08, 2025 | 6:04 PM

ಅಸಲಿಗೆ ಜೋಕರ್ ಅನ್ನುವ ಪದ ತನಗಿಂತ ಜಾಸ್ತಿ ಕುಮಾರಸ್ವಾಮಿಗೆ ಸೂಟ್ ಅಗುತ್ತದೆ, ತಾನು ಮಂಡ್ಯದ ಮಣ್ಣಿನ ಮಗ, ಅಪ್ಪಟ ರೈತನ ಮಗ, ಭಾಷೆಯ ಇತಿಮಿತಿಗಳು ಗೊತ್ತು, ಸುಸಂಸ್ಕೃತ ಅಂತ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ, ಸಿದ್ಧಗಂಗಾ ಮಠದ ಸ್ವಾಮೀಜಿಗಳ ಸಂಪರ್ಕದಲ್ಲಿದ್ದ ತನಗೆ ಯಾರನ್ನು ಹೇಗೆ ಟೀಕಿಸಬೇಕು ಅಂತ ಚೆನ್ನಾಗಿ ಗೊತ್ತಿದೆ, ವಿನಾಕಾರಣ ಯಾರನ್ನೂ ಟೀಕಿಸಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ, ಏಪ್ರಿಲ್ 8: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತನ್ನನ್ನು ಜೋಕರ್ ಅಂತ ಹೇಳಿದ್ದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರನ್ನು ವ್ಯಗ್ರರನ್ನಾಗಿಸಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಾಲಗೆಗೆ ಎಲುಬಿಲ್ಲ ಅಂತ ಮನಸ್ಸಿಗೆ ಬಂದಿದ್ದನೆಲ್ಲ ಮಾತಾಡಿದರೆ ಗೌರವ ಸಿಗಲ್ಲ, ಅವರು ತನ್ನನ್ನು ಮಂತ್ರಿ ಮಾಡಿದ್ದೆ ಅಂತ ಹೇಳಿದರೆ ಅವರನ್ನು ಮುಖ್ಯಮಂತ್ರಿ ಮಾಡಲು ತಾನು ಕಾರಣನಾಗಿದ್ದೆ ಅನ್ನೋದನ್ನು ಮರೆಯಬಾರದು, ಕುಮಾರಸ್ವಾಮಿಗೆ ಬಾಯಿ ಚಪಲ, ಟಿವಿಯಲ್ಲಿ ಕಾಣಿಸಿಕೊಳ್ಳದಿದ್ದರೆ ನಿದ್ದೆ ಬರಲ್ಲ, ಟಿವಿಯಲ್ಲಿ ಬಂದಾಕ್ಷಣ ಸಿದ್ದರಾಮಯ್ಯರನ್ನು, ಶಿವಕುಮಾರ್ ರನ್ನು ಮತ್ತು ತನ್ನನ್ನು ಬಯ್ಯುವುದಷ್ಟೇ ಅವರು ಮಾಡೋದು, ಅವರಿಗೆ ಸೌಜನ್ಯತೆ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ:   ಗನ್-ಬಂದೂಕು ಹಿಡಿಯುವ ಸಂಸ್ಕೃತಿ ನನ್ನದಲ್ಲ, ದಾಖಲೆಗಳು ಗನ್​ಗಿಂತ ಹೆಚ್ಚು ಶಕ್ತಿಶಾಲಿ: ಹೆಚ್ ಡಿ ಕುಮಾರಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More