‘ಲವ್​ ಮಾಕ್ಟೇಲ್’​ ನೋಡುವಂತೆ ರವಿ ಡಿ. ಚನ್ನಣ್ಣನವರ್​ಗೆ​ ಪತ್ನಿಯ ಒತ್ತಾಯ; ದಕ್ಷ ಅಧಿಕಾರಿಗೆ ಸಿನಿಮಾ ಇಷ್ಟ ಆಯ್ತಾ?

‘ನನ್ನ 13 ವರ್ಷದ ಸೇವಾವಧಿಯಲ್ಲಿ ಇದೇ ಮೊದಲ ಬಾರಿಗೆ ಇಂಥ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಅದಕ್ಕೆ ಎರಡು ಕಾರಣ’ ಎಂದು ‘ದಿಲ್ ಪಸಂದ್​’ ಚಿತ್ರದ ಸುದ್ದಿಗೋಷ್ಠಿಯಲ್ಲಿ ರವಿ ಡಿ. ಚನ್ನಣ್ಣನವರ್​ ಮಾತು ಆರಂಭಿಸಿದರು. ‘ಲವ್​ ಮಾಕ್ಟೇಲ್​’ ಚಿತ್ರವನ್ನೂ ಹಾಡಿ ಹೊಗಳಿದರು.

‘ಲವ್​ ಮಾಕ್ಟೇಲ್’​ ನೋಡುವಂತೆ ರವಿ ಡಿ. ಚನ್ನಣ್ಣನವರ್​ಗೆ​ ಪತ್ನಿಯ ಒತ್ತಾಯ; ದಕ್ಷ ಅಧಿಕಾರಿಗೆ ಸಿನಿಮಾ ಇಷ್ಟ ಆಯ್ತಾ?
| Updated By: ಮದನ್​ ಕುಮಾರ್​

Updated on:Sep 28, 2021 | 1:47 PM

ನಟ ಡಾರ್ಲಿಂಗ್​ ಕೃಷ್ಣ ಅವರ ಹೊಸ ಸಿನಿಮಾ ‘ದಿಲ್​ ಪಸಂದ್​’ ಶೀರ್ಷಿಕೆ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರವಿ ಡಿ. ಚನ್ನಣ್ಣನವರ್​ ಆಗಮಿಸಿದ್ದರು. ಆ ವೇದಿಕೆಯಲ್ಲಿ ಅನೇಕ ವಿಚಾರಗಳನ್ನು ಅವರು ಹಂಚಿಕೊಂಡರು. ತಾವು ಈ ಕಾರ್ಯಕ್ರಮಕ್ಕೆ ಬರಲು ಡಾರ್ಲಿಂಗ್​ ಕೃಷ್ಣ ಕೂಡ ಪ್ರಮುಖ ಕಾರಣ ಎಂಬುದನ್ನು ಅವರು ತಿಳಿಸಿದರು. ‘ಲವ್​ ಮಾಕ್ಟೇಲ್​’ ಸಿನಿಮಾವನ್ನು ಅವರ ಇಡೀ ಫ್ಯಾಮಿಲಿ ಮೆಚ್ಚಿಕೊಂಡಿದೆ. ಆ ಬಗ್ಗೆ ರವಿ ಡಿ. ಚನ್ನಣ್ಣನವರ್​ ವಿವರಿಸಿದರು.

‘ಶಾಲೆ, ಕಾಲೇಜು, ಮಠ ಮುಂತಾದ ಕಡೆಗಳಲ್ಲಿ ಮಾತನಾಡಿ ನನಗೆ ಅಭ್ಯಾಸ. ನನ್ನ 13 ವರ್ಷದ ಸೇವಾವಧಿಯಲ್ಲಿ ಇದೇ ಮೊದಲ ಬಾರಿಗೆ ಇಂಥ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಅದಕ್ಕೆ ಎರಡು ಕಾರಣ. ನಿರ್ಮಾಪಕ ಸುಮಂತ್​ ಕ್ರಾಂತಿ ನನ್ನ ಸ್ನೇಹಿತ ಎಂಬುದು ಒಂದು ಕಾರಣ. ಎರಡನೇ ಕಾರಣ ಡಾರ್ಲಿಂಗ್​ ಕೃಷ್ಣ. ಅವರು ನಟಿಸಿದ ‘ಲವ್​ ಮಾಕ್ಟೇಲ್​’ ಚಿತ್ರವನ್ನು ನನ್ನ ಹೆಂಡತಿ ಒತ್ತಾಯದ ಮೇರೆಗೆ ನೋಡಿದೆ. ಮಿಲನಾ ನಾಗರಾಜ್​ ಮತ್ತು ಕೃಷ್ಣ ಅವರು ಕಷ್ಟಪಟ್ಟು ಆ ಸಿನಿಮಾ ಮಾಡಿದ್ದಾರೆ’ ಎಂದು ರವಿ ಡಿ. ಚನ್ನಣ್ಣನವರ್​ ಮನಸಾರೆ ಹೊಗಳಿದರು.

ಇದನ್ನೂ ಓದಿ:

ಸಿನಿಮಾ ಬ್ಲಾಕ್​ ಟಿಕೆಟ್​ ಮಾರುತ್ತಿದ್ದ ರವಿ ಡಿ. ಚನ್ನಣ್ಣನವರ್​: ‘ದಿಲ್​ ಪಸಂದ್​’ ವೇದಿಕೆಯಲ್ಲಿ ಅಚ್ಚರಿ ವಿಚಾರ ಬಹಿರಂಗ

ಮದುವೆ ಬಳಿಕ ಹೇಗಿದೆ ಮಿಲನಾ-ಡಾರ್ಲಿಂಗ್​ ಕೃಷ್ಣ ದಂಪತಿಯ ಸಿನಿಮಾ ಜರ್ನಿ ಮತ್ತು ಜೀವನ?

Published On - 1:42 pm, Tue, 28 September 21

Follow us
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ