AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ; ವಿಡಿಯೋ

ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ; ವಿಡಿಯೋ

ಪೃಥ್ವಿಶಂಕರ
|

Updated on: Jun 04, 2025 | 7:39 PM

Share

Bengaluru Welcomes RCB Champions: 17 ವರ್ಷಗಳ ಬಳಿಕ ಆರ್​ಸಿಬಿ ತಂಡ ಮಿಲಿಯನ್ ಡಾಲರ್ ಟೂರ್ನಿಯನ್ನು ಗೆದ್ದು ಬೆಂಗಳೂರಿಗೆ ಮರಳಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ತಂಡವನ್ನು ಸ್ವಾಗತಿಸಿದರು. ಆರ್​ಸಿಬಿ ಅಭಿಮಾನಿಗಳು ತಂಡಕ್ಕೆ ಅದ್ಭುತ ಸ್ವಾಗತ ನೀಡಿದರು. ಆರ್​ಸಿಬಿ ತನ್ನ ಅಭಿಮಾನಿಗಳ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದೆ.

ಬರೋಬ್ಬರಿ 17 ವರ್ಷಗಳ ಬಳಿಕ ಮಿಲಿಯನ್ ಡಾಲರ್ ಟೂರ್ನಿಯನ್ನು ಗೆದ್ದುಬೀಗಿರುವ ಆರ್​​ಸಿಬಿ ತಂಡ ಇಂದು ಟ್ರೋಫಿಯೊಂದಿಗೆ ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಪೂರ್ವ ನಿರ್ಧರಿತ ಕಾರ್ಯಕ್ರಮದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಇಡೀ ತಂಡವನ್ನು ಸ್ವಾಗತಿಸಿದರು. ಆ ಬಳಿಕ ತಂಡದ ಆಟಗಾರರು ಎರಡು ಬಸ್​ಗಳಲ್ಲಿ ತಾಜ್ ವೆಸ್ಟ್ ಎಂಡ್ ಹೋಟೆಲ್​ಗೆ ಪ್ರಯಾಣ ಬೆಳೆಸಿದರು. ವಿಮಾನ ನಿಲ್ದಾಣದಿಂದ ಹೋಟೆಲ್​ವರೆಗೂ ಇಡೀ ತಂಡಕ್ಕೆ ಆರ್​ಸಿಬಿ ಅಭಿಮಾನಿಗಳ ಭವ್ಯ ಸ್ವಾಗತ ದೊರೆತಿತು. ಅಭಿಮಾನಿಗಳ ಈ ಅಭಿಮಾನಕ್ಕೆ ಆರ್​ಸಿಬಿ ಫ್ರಾಂಚೈಸಿಯೇ ಮನಸೋತಿದ್ದು, ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ನಮ್ಮ ಅಭಿಮಾನಿಗಳ ತರ ಬೇರೆ ಯಾರು ಇಲ್ಲ, ನೀವೇ ನಮ್ಮ ಜೀವ ಸ್ವರ ಎಂದು ಬರೆದುಕೊಂಡಿದೆ.