ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ; ವಿಡಿಯೋ

Updated on: Jun 04, 2025 | 7:39 PM

Bengaluru Welcomes RCB Champions: 17 ವರ್ಷಗಳ ಬಳಿಕ ಆರ್​ಸಿಬಿ ತಂಡ ಮಿಲಿಯನ್ ಡಾಲರ್ ಟೂರ್ನಿಯನ್ನು ಗೆದ್ದು ಬೆಂಗಳೂರಿಗೆ ಮರಳಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ತಂಡವನ್ನು ಸ್ವಾಗತಿಸಿದರು. ಆರ್​ಸಿಬಿ ಅಭಿಮಾನಿಗಳು ತಂಡಕ್ಕೆ ಅದ್ಭುತ ಸ್ವಾಗತ ನೀಡಿದರು. ಆರ್​ಸಿಬಿ ತನ್ನ ಅಭಿಮಾನಿಗಳ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದೆ.

ಬರೋಬ್ಬರಿ 17 ವರ್ಷಗಳ ಬಳಿಕ ಮಿಲಿಯನ್ ಡಾಲರ್ ಟೂರ್ನಿಯನ್ನು ಗೆದ್ದುಬೀಗಿರುವ ಆರ್​​ಸಿಬಿ ತಂಡ ಇಂದು ಟ್ರೋಫಿಯೊಂದಿಗೆ ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಪೂರ್ವ ನಿರ್ಧರಿತ ಕಾರ್ಯಕ್ರಮದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಇಡೀ ತಂಡವನ್ನು ಸ್ವಾಗತಿಸಿದರು. ಆ ಬಳಿಕ ತಂಡದ ಆಟಗಾರರು ಎರಡು ಬಸ್​ಗಳಲ್ಲಿ ತಾಜ್ ವೆಸ್ಟ್ ಎಂಡ್ ಹೋಟೆಲ್​ಗೆ ಪ್ರಯಾಣ ಬೆಳೆಸಿದರು. ವಿಮಾನ ನಿಲ್ದಾಣದಿಂದ ಹೋಟೆಲ್​ವರೆಗೂ ಇಡೀ ತಂಡಕ್ಕೆ ಆರ್​ಸಿಬಿ ಅಭಿಮಾನಿಗಳ ಭವ್ಯ ಸ್ವಾಗತ ದೊರೆತಿತು. ಅಭಿಮಾನಿಗಳ ಈ ಅಭಿಮಾನಕ್ಕೆ ಆರ್​ಸಿಬಿ ಫ್ರಾಂಚೈಸಿಯೇ ಮನಸೋತಿದ್ದು, ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ನಮ್ಮ ಅಭಿಮಾನಿಗಳ ತರ ಬೇರೆ ಯಾರು ಇಲ್ಲ, ನೀವೇ ನಮ್ಮ ಜೀವ ಸ್ವರ ಎಂದು ಬರೆದುಕೊಂಡಿದೆ.

Follow Us
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More