AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ

ಸುಷ್ಮಾ ಚಕ್ರೆ
|

Updated on:Jun 04, 2025 | 5:08 PM

Share

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್​ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ.

ಬೆಂಗಳೂರು, ಜೂನ್ 4: ಮೊದಲ ಬಾರಿಗೆ ಐಪಿಎಲ್  (IPL) ಕಪ್ ಗೆದ್ದಿರುವ ಆರ್​ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ (RCB Team) ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್​ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಇದರ ನಡುವೆ ಕೆಲವು ಅಭಿಮಾನಿಗಳು ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಆರ್​ಸಿಬಿ ಎಂದು ಕೂಗುತ್ತಾ ಸ್ಟಂಟ್ ಮಾಡುತ್ತಿದ್ದಾರೆ. ಅವರನ್ನು ಕೆಳಗಿಳಿಸಲು ಪೊಲೀಸರು ಪರದಾಡುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jun 04, 2025 05:06 PM
Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More