AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ

ಸುಷ್ಮಾ ಚಕ್ರೆ
|

Updated on:Jun 04, 2025 | 5:08 PM

Share

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್​ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ.

ಬೆಂಗಳೂರು, ಜೂನ್ 4: ಮೊದಲ ಬಾರಿಗೆ ಐಪಿಎಲ್  (IPL) ಕಪ್ ಗೆದ್ದಿರುವ ಆರ್​ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್​ಸಿಬಿ ತಂಡದ (RCB Team) ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್​ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಇದರ ನಡುವೆ ಕೆಲವು ಅಭಿಮಾನಿಗಳು ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಆರ್​ಸಿಬಿ ಎಂದು ಕೂಗುತ್ತಾ ಸ್ಟಂಟ್ ಮಾಡುತ್ತಿದ್ದಾರೆ. ಅವರನ್ನು ಕೆಳಗಿಳಿಸಲು ಪೊಲೀಸರು ಪರದಾಡುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jun 04, 2025 05:06 PM