AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB IPL Victory Stampede: ಆರ್​ಸಿಬಿ ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

RCB IPL Victory Stampede: ಆರ್​ಸಿಬಿ ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ವಿವೇಕ ಬಿರಾದಾರ
|

Updated on: Jun 04, 2025 | 10:01 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 10 ಜನರು ಮೃತಪಟ್ಟಿದ್ದಾರೆ. ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದ ಸಾವಿರಾರು ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ಅನೇಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು, ಜೂನ್​ 04: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ವಿಜಯ ಸಂಭ್ರಮಚರಣೆ ಮತ್ತು ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾವಿರಾರು ಮಂದಿ ಆರ್​ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮತ್ತು ವಿಧಾನಸೌಧ ಎದುರು ಜಮಾಯಿಸಿದ್ದರು.ಈ ವೇಳೆ ಘೋರ ದುರಂತ ಸಂಭವಿಸಿದೆ. ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಂದಿ ಮೃತಟ್ಟಿದ್ದಾರೆ. ಕಾಲ್ತುಳಿತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು