ಆರ್​ಸಿಬಿ ಐಪಿಎಲ್ ಚಾಂಪಿಯನ್: ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ

Edited By:

Updated on: Jun 04, 2025 | 1:06 PM

ಆರ್​ಸಿಬಿ ಐಪಿಎಲ್ ಚಾಂಪಿಯನ್ ಆದ ಖುಷಿಗೆ ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಎಂಬವರು ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ 12 ರಿಂದ ಉಚಿತ ಹೋಳಿಗೆ ಊಟ ವಿತರಣೆ ಶುರುವಾಗಿದ್ದು, ವಿಡಿಯೋ ಇಲ್ಲಿದೆ.

ಮೈಸೂರು, ಜೂನ್ 4: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಫೈನಲ್ ಗೆದ್ದ ಸಂಭ್ರಮದಲ್ಲಿ ಮೈಸೂರು ಇಂದಿರಾ ಕ್ಯಾಂಟೀನ್​​ನಲ್ಲಿ ಇಂದು ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದೆ. 18 ವರ್ಷಗಳ ಕನಸು ನನಸಾದ ಕಾರಣ ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಎಂಬವರು ಉಚಿತ ಹೋಳಿಗೆ ಊಟ ವ್ಯವಸ್ಥೆ ಮಾಡಿದ್ದಾರೆ. ಮೈಸೂರು ನಗರದ ಎಲ್ಲಾ ಇಂದಿರಾ ಕ್ಯಾಂಟೀನ್​ಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಉಚಿತ ಹೋಳಿಗೆ ಊಟ ವಿತರಣೆ ನಡೆಯುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More