Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮಾತ್ಮ ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ; ಭಾವುಕರಾದ ಫ್ಯಾನ್ಸ್

ಪರಮಾತ್ಮ ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ; ಭಾವುಕರಾದ ಫ್ಯಾನ್ಸ್

ಪೃಥ್ವಿಶಂಕರ
|

Updated on:Mar 17, 2025 | 10:21 PM

RCB Unbox Event: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್‌ಬಾಕ್ಸ್ ಈವೆಂಟ್ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದಂದು ಅವರನ್ನು ಸ್ಮರಿಸಲಾಯಿತು. ಶಿವರಾಜ್‌ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜಯಪ್ರಕಾಶ್ ಅವರು ರಾಜ್‌ಕುಮಾರ್ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡನ್ನು ಹಾಡುವ ಮೂಲಕ ಅಭಿಮಾನಿಗಳನ್ನು ಭಾವುಕರಾಗಿಸಿದರು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್ ಈವೆಂಟ್ ಅದ್ಧೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಕರ್ನಾಟಕ ರತ್ನ ಪುನೀತ್​ ರಾಜ್​ಕುಮಾರ್ ಅವರನ್ನು ಸ್ಮರಿಸಲಾಯಿತು. ವಾಸ್ತವವಾಗಿ ಈ ಕಾರ್ಯಕ್ರಮ ನಡೆಯುತ್ತಿರುವ ದಿನದಂದೇ ಅಪ್ಪು ಅವರ 50ನೇ ಜನ್ಮದಿನವಾಗಿದ್ದು, ಅಗಲಿದ ಮಹಾನ್ ಚೇತನಕ್ಕೆ ಆರ್​ಸಿಬಿ ವಿಶೇಷ ಗೌರವವನ್ನು ಸಲ್ಲಿಸಿತು. ಇನ್ನು ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್ ಸಹ ಹಾಜರಿದ್ದರು. ಇದೇ ವೇಳೆ ಗಾಯಕ ವಿಜಯಪ್ರಕಾಶ್ ಅವರು ರಾಜ್​ಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಗೀತೆಯನ್ನು ಹಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು.

Published on: Mar 17, 2025 10:19 PM