Video: ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು, ಕೊನೆಗೂ ಗೆದ್ರು ನಮ್ಮ ಹುಡುಗಿಯರು

Updated on: Feb 06, 2026 | 12:22 PM

ಆರ್​ಸಿಬಿ ಮಹಿಳಾ ತಂಡ ಎರಡನೇ ಬಾರಿ WPL ಚಾಂಪಿಯನ್ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಸ್ಮೃತಿ ಮಂದಾನ ಹಾಗೂ ಜಾರ್ಜಿಯಾ ವಾಲ್ ಅವರ ಅಬ್ಬರದ ಬ್ಯಾಟಿಂಗ್ ತಂಡದ ಗೆಲುವಿಗೆ ನಿರ್ಣಾಯಕವಾಯಿತು. ಈ ವಿಜಯವು ಮಹಿಳಾ ಕ್ರಿಕೆಟ್‌ನ ಹೆಚ್ಚುತ್ತಿರುವ ಜನಪ್ರಿಯತೆ ಹಾಗೂ ಮಹಿಳೆಯರ ಸಾಮರ್ಥ್ಯವನ್ನು ಎತ್ತಿ ಹಿಡಿದಿದೆ. ಅಂತಿಮ ಕ್ಷಣದವರೆಗೂ ಕುತೂಹಲ ಕೆರಳಿಸಿದ್ದ ಈ ಪಂದ್ಯ ಜನರ ಮೆಚ್ಚುಗೆ ಗಳಿಸಿದೆ.

ನೆನ್ನೆ ನಡೆದ (ಫೆ.5) ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ ಆರ್​​ಸಿಬಿ ಮಹಿಳಾ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದು ತಂಡದ ಎರಡನೇ WPL ಪ್ರಶಸ್ತಿಯಾಗಿದೆ. ಗುಜರಾತ್‌ನ ವಡೋದರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಹುಡುಗಿಯರು ರೋಚಕ ವಿಜಯ ಸಾಧಿಸಿ ಕಪ್ ಎತ್ತಿ ಹಿಡಿದರು. ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಪಂದ್ಯದ ಆರಂಭಿಕ ಹಂತದಲ್ಲಿ ಆರ್​ಸಿಬಿ ತಂಡದ ಗೆಲುವಿನ ಬಗ್ಗೆ ಕೆಲವು ಅಭಿಮಾನಿಗಳಲ್ಲಿ ಸಂದೇಹಗಳಿದ್ದವು. ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಸ್ಕೋರ್ ಗಳಿಸಿದ್ದರಿಂದ ಚೇಸ್ ಮಾಡುವುದು ಸುಲಭವಲ್ಲ ಎಂದು ಅನೇಕರು ಭಾವಿಸಿದ್ದರು. ಆದರೆ, ನಾಯಕಿ ಸ್ಮೃತಿ ಮಂದಾನ ಮತ್ತು ಜಾರ್ಜಿಯಾ ವಾಲ್ ಅವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವು ಪಂದ್ಯದ ಗತಿಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸ್ಮೃತಿ ಮಂದಾನ 87 ರನ್ ಸಿಡಿಸಿ ತಂಡವನ್ನು ಮುನ್ನಡೆಸಿದರು. ಅವರ ನಾಯಕತ್ವದ ಇನ್ನಿಂಗ್ಸ್ ಮತ್ತು ವಾಲ್ ಅವರ ಜೊತೆಯಾಟವು ಆರ್​ಸಿಬಿ ಗೆಲುವಿಗೆ ಪ್ರಮುಖ ಕಾರಣವಾಯಿತು. ಅಭಿಮಾನಿಗಳು ಈ ಗೆಲುವಿನಿಂದ ಅತಿ ಹೆಚ್ಚು ಸಂತೋಷಗೊಂಡಿದ್ದಾರೆ. ಒಬ್ಬ ಅಭಿಮಾನಿಯಾದ ತೇಜಸ್ ಅವರ ಪ್ರಕಾರ, “ಇದು ನಮ್ಮ ಹುಡುಗರು ಗೆದ್ದಾಗ ಸಿಗುವ ಮಜಾವನ್ನೇ ನೀಡಿದೆ. ಪಂದ್ಯದ ಪ್ರತಿಯೊಂದು ಎಸೆತವೂ ರೋಮಾಂಚನಕಾರಿಯಾಗಿತ್ತು ಎಂದು ಅವರು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿಯಾದ ಶ್ರುತಿ ಮಾತನಾಡಿ, “ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು. ಆದರೆ ಕೊನೆಗೆ ಗೆಲುವು ಕಂಡಿದ್ದು ನಂಬಲಾಗದ ಸಂಗತಿಯಾಗಿತ್ತು” ಎಂದು ಹೇಳಿದ್ದಾರೆ. ಈ ವಿಜಯವು ಮಹಿಳಾ ಕ್ರಿಕೆಟ್‌ಗೆ ಒಂದು ದೊಡ್ಡ ಉತ್ತೇಜನ ನೀಡಿದೆ ಎಂದು ಹೇಳಿದ್ದಾರೆ. ಸರ್ವಮಂಗಳ ಎಂಬ ಅಭಿಮಾನಿ, “ಹೆಣ್ಣುಮಕ್ಕಳೇ ಸ್ಟ್ರಾಂಗ್ ಗುರು. ನಮ್ಮ ಹುಡುಗರು ಇಷ್ಟು ವರ್ಷ ಕಪ್ ಗೆಲ್ಲಲು ಕಾಯಿಸಿದರೂ, ನಮ್ಮ ಹುಡುಗಿಯರು ಎರಡನೇ ಸಾರಿ ಪ್ರೂವ್ ಮಾಡಿದ್ದಾರೆ” ಎಂದು ಹೇಳುವ ಮೂಲಕ ಮಹಿಳಾ ತಂಡದ ಸಾಧನೆಯನ್ನು ಶ್ಲಾಘಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More